Advertisement

ಅಭಿವೃದ್ಧಿ ಕಾರ್ಯಗಳಿಗೆ ಮೊದಲ ಆದ್ಯತೆ

12:19 PM May 11, 2020 | Naveen |

ಸಿರವಾರ: ಗ್ರಾಮ ಮಟ್ಟದಲ್ಲಿ ಅಭಿವೃದ್ದಿಯಾದರೆ ಮಾತ್ರ ಎಲ್ಲರಿಗೂ ಅನುಕೂಲ. ಅದಕ್ಕಾಗಿ ಅಭಿವೃದ್ಧಿ ಕಾರ್ಯಗಳಿಗೆ ಮೊದಲ ಆದ್ಯತೆ ನೀಡುತ್ತೇನೆ ಎಂದು ಶಾಸಕ ರಾಜಾವೆಂಕಟಪ್ಪ ನಾಯಕ ಹೇಳಿದರು.

Advertisement

ತಾಲೂಕಿನ ಬಲ್ಲಟಗಿ ಬಸವಣ್ಣ ಕ್ಯಾಂಪ್‌ನಲ್ಲಿ ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ ಮತ್ತು ಉಪ ಕಾಲುವೆಗಳಿಗೆ ಎರಡು ಬದಿ ಸೇವಾ ರಸ್ತೆಗಳಿಗೆ ಮೆಟ್ಲಿಂಗ್‌ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಎಡದಂಡೆ ನಾಲೆ ಕೊನೆ ಭಾಗಕ್ಕೆ ಸಮರ್ಪಕವಾಗಿ ನೀರು ತಲುಪದೇ ರೈತರು ಪರದಾಡುತ್ತಿದ್ದಾರೆ. ನಾಲೆ ರಸ್ತೆಗಳು ಹಾಳಾಗಿದ್ದರಿಂದ ಅಧಿಕಾರಿಗಳು ಸಂಚರಿಸಲು ತೊಂದರೆಯಾಗುತ್ತಿತ್ತು. ಇದರಿಂದ ನೀರಿನ ಕಳ್ಳತನ ತಡೆಯಲು ಅಡ್ಡಿಯಾಗಿತ್ತು. ರಸ್ತೆ ನಿರ್ಮಾಣ ಮಾಡುವುದರಿಂದ ಕೆಳ ಭಾಗಕ್ಕೆ ಸಮರ್ಪಕವಾಗಿ ನೀರು ಹರಿಸುವುದಕ್ಕೆ ಅನುಕೂಲವಾಗುತ್ತದೆ ಎಂದು ಹೇಳಿದರು.

ಜೆಡಿಎಸ್‌ ತಾಲೂಕು ಘಟಕದ ಅಧ್ಯಕ್ಷ ಮಲ್ಲಿಕಾರ್ಜುನಗೌಡ ಬಲ್ಲಟಗಿ, ಜಿ. ಲೋಕರೆಡ್ಡಿ, ಜಂಬುನಾಥ ಯಾದವ, ರಾಜಾ ರಾಮಚಂದ್ರ ನಾಯಕ, ನಾಗರಾಜ ಭೋಗವತಿ, ಸಂತೋಷ ಹೂಗಾರ, ಗೋಪಾಲ ನಾಯಕ ಹರವಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next