Advertisement

ರಸ್ತೆ ಕಾಮಗಾರಿ ಪೂರ್ಣಗೊಳಿಸಿ

12:14 PM May 31, 2020 | Naveen |

ಸಿರವಾರ: ಪಟ್ಟಣದ ರಾಜೀವ ನಗರದಲ್ಲಿ ಅರ್ಧಕ್ಕೆ ನಿಂತಿರುವ ಕಾಂಕ್ರೀಟ್‌ ರಸ್ತೆ ಕಾಮಗಾರಿ ಪೂರ್ಣಗೊಳಿಸುವಂತೆ ಒತ್ತಾಯಿಸಿ ಹೈದರಾಬಾದ್‌ -ಕರ್ನಾಟಕ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಪಟ್ಟಣ ಪಂಚಾಯಿತಿ ಸಿಬ್ಬಂದಿಗೆ ಮನವಿ ಸಲ್ಲಿಸಿದರು.

Advertisement

ರಾಜೀವ ನಗರದಲ್ಲಿ ಕಳೆದ ಡಿಸೆಂಬರ್‌ನಲ್ಲಿ ಕಾಂಕ್ರೀಟ್‌ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ಆದರೆ ಕೇವಲ ಚರಂಡಿ ಕಾಮಗಾರಿ ಮಾಡಲಾಗಿದೆ. ಕಾಂಕ್ರೀಟ್‌ ರಸ್ತೆ ಕಾಮಗಾರಿ ಅರ್ಧಕ್ಕೆ ನಿಲ್ಲಿಸಲಾಗಿದೆ. ಅಧಿಕಾರಿಗಳು ಕೂಡಲೇ ಕಾಂಕ್ರೀಟ್‌ ರಸ್ತೆ ಪೂರ್ಣಗೊಳಿಸಿ ಚರಂಡಿ ಮುಚ್ಚುವ ಜತೆಗೆ ಕಾಮಗಾರಿ ರಸ್ತೆಯಲ್ಲಿ ಅಡ್ಡವಿರುವ ವಿದ್ಯುತ್‌ ಕಂಬಗಳನ್ನು ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿದರು.

ಸಂಘಟನೆ ತಾಲೂಕು ಘಟಕದ ಅಧ್ಯಕ್ಷ ಆರ್‌. ನಾಗರಾಜ, ಮಹಿಳಾ ಘಟಕದ ಅಧ್ಯಕ್ಷೆ ಕಮಲಮ್ಮ, ಹನುಮಂತಿ, ನಾಗರಾಜ ಬೊಮ್ಮನಾಳ, ಜಗನ್ನಾಥ, ಜಿ.ಎಸ್‌. ರಮೇಶ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next