Advertisement

Sirawara: ಸಹೋದರತ್ತೆ ಕಾಟಕ್ಕೆ ಬೇಸತ್ತು ಅಳಿಯ ಆತ್ಮಹತ್ಯೆ

05:26 PM Oct 02, 2024 | Team Udayavani |

ಸಿರವಾರ: ಜಮೀನು ವಿಚಾರಕ್ಕೆ ಅತ್ತೆ ಮತ್ತು ಅಳಿಯನ ನಡುವೆ ಜಗಳ ನಡೆದಿದ್ದು, ಅತ್ತೆಯ ಬೆದರಿಕೆಗೆ ಮನನೊಂದು ಅಳಿಯ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕಲೂರು ಗ್ರಾಮದಲ್ಲಿ ಅ.2ರ ಬುಧವಾರ ನಡೆದಿದೆ.

Advertisement

ಹುಲಿಗೆಪ್ಪ (22) ಆತ್ಮಹತ್ಯೆ ಮಾಡಿಕೊಂಡವರು.

ಹುಲಿಗೆಪ್ಪ ಮನೆಯಲ್ಲಿ ಯಾರು ಇಲ್ಲದ ವೇಳೆ ಡೆತ್‌ ನೋಟ್ ಬರೆದಿಟ್ಟು ವಿಷ ಸೇವಿಸಿದ್ದಾರೆ. ಡೆತ್ ನೋಟ್‌ನಲ್ಲಿ ಜಾಗದ ವಿಚಾರವಾಗಿ ಅತ್ತೆ ಲಕ್ಷ್ಮಿ, ಅತ್ತೆಯ ಮಗಳ ಅನುರಾಧ, ಮಹಾದೇವಿ, ಅನಿಲ್ ಎಂಬವವರ ಹೆಸರು ಪ್ರಸ್ತಾಪ ಮಾಡಿದ್ದಾರೆ. ನನ್ನ ಸಾವಿಗೆ ನನ್ನ ಅತ್ತೆ ಲಕ್ಷ್ಮಿದೇವಿ ಮತ್ತು ಆಕೆಯ ಮಕ್ಕಳೇ ಕಾರಣ. ನಮ್ಮ 17 ಗುಂಟೆ ಜಾಗ ತಮ್ಮದು ಎಂದು ನಮಗೆ ಬೆದರಿಕೆ ಹಾಕಿದ್ದಾರೆ. ನನ್ನ ಸಾವಿನ ಬಳಿಕವಾದರೂ ನಮ್ಮ ಜಾಗ ನಮಗೆ ಕೊಡಿ ಎಂದು ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಸಿರವಾರ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ರಿಮ್ಸ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.

ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಕೈಗೊಂಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next