Advertisement

ಕೋವಿಡ್ ವೈರಸ್‌ ಹರಡದಂತೆ ಜಾಗ್ರತೆ ವಹಿಸಿ

01:10 PM May 08, 2020 | Naveen |

ಸಿರಿಗೆರೆ: ಕೋವಿಡ್ ವೈರಸ್‌ ಹರಡದಂತೆ ಎಲ್ಲರೂ ಜಾಗ್ರತೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಆರ್‌. ವಿನೋತ್‌ ಪ್ರಿಯಾ ಹೇಳಿದರು. ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದ ಕೋವಿಡ್‌ ಹೆಲ್ತ್‌ ಕೇರ್‌ ಸೆಂಟರ್‌ಗೆ ಭೇಟಿ ನೀಡಿ ಅವರು ಮಾತನಾಡಿದರು. ಆರೋಗ್ಯ ತಪಾಸಣೆಗೆ ಬಂದ ಜನರಲ್ಲಿ ಕೋವಿಡ್‌-19 ವೈರಸ್‌ ಬಗ್ಗೆ ಅರಿವು ಮೂಡಿಸಿ ಉಚಿತ ತಪಾಸಣೆ ಮಾಡಬೇಕು. ಸ್ವಚ್ಛತೆ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ತಪಾಸಣೆಗೆ ಬಂದವರಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸಲು ತಿಳಿಸಬೇಕೆಂದರು.

Advertisement

ಡಿಎಚ್‌ಒ ಡಾ| ಪಾಲಾಕ್ಷ ಮಾತನಾಡಿ, ಲಘು ಕೋವಿಡ್‌ ಪ್ರಕರಣಗಳಿದ್ದಲ್ಲಿ ಅಥವಾ ಪಾಸಿಟಿವ್‌ ಕಂಡು ಬಂದಲ್ಲಿ ಸಮುದಾಯ ಆರೋಗ್ಯ ಕೇಂದ್ರಲ್ಲಿ ತಪಾಸಣೆಗೆ ಅನುಕೂಲ ಮಾಡಿಕೊಡಲಾಗುವುದು. ಜಿಲ್ಲೆಯ 11 ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಮೂರು ವಿಧವಾದ ಕೇಂದ್ರಗಳಾಗಿ ವಿಭಾಗಿಸಲಾಗಿದೆ. ಡೆಡಿಕೇಟೆಡ್‌ ಕೋವಿಡ್‌ ಹೆಲ್ತ್‌ ಸೆಂಟರ್‌, ಕೋವಿಡ್‌ ಹೆಲ್ತ್‌ ಸೆಂಟರ್‌ ಮತ್ತು ಕೋವಿಡ್‌ ಕೇರ್‌ ಸೆಂಟರ್‌ ಎಂದು ವಿಂಗಡಿಸಲಾಗಿದೆ. ಗ್ರಾಮಸ್ಥರು ಜಿಲ್ಲಾಸ್ಪತ್ರೆಗೆ ಬರುವ ಮೊದಲು ಸಮುದಾಯ ಆರೋಗ್ಯ ಕೇಂದ್ರದಲ್ಲಿ ತಪಾಸಣೆ ಮಾಡಿಸಿ. ಸೂಕ್ಷ್ಮ ಪ್ರಕರಣಗಳಿದ್ದಲ್ಲಿ ವೈದ್ಯಾಧಿಕಾರಿಗಳು ತಿಳಿಸಿದ ನಂತರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿಕೊಳ್ಳುತ್ತೇವೆ ಎಂದರು. ಉಪವಿಭಾಗಾಧಿಕಾರಿ ಪ್ರಸನ್ನಕುಮಾರ್‌, ಡಾ| ಕುಮಾರ್‌, ವೈದ್ಯಾಧಿಕಾರಿಗಳಾದ ರೂಪಾ, ಹೇಮಂತ್‌, ಶಿಲ್ಪಾ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next