Advertisement
ಬೆಂಗಳೂರಿನ ಪ್ರಥಮ ಮೇಲ್ಸೇತುವೆ ಎಂಬ ಹೆಗ್ಗಳಿಕೆಯನ್ನು ಸಿರ್ಸಿ ಮೇಲ್ಸೇತುವೆ ಹೊಂದಿದೆ. ಆದರೆ, ಮೇಲ್ಸೇತುವೆಯಲ್ಲಿ ಸಂಚರಿಸುವ ವಾಹನಗಳ ಸಂಖ್ಯೆ ಹೆಚ್ಚಾದ ಪರಿಣಾಮ, ನಿರಂತರವಾಗಿ ಗುಂಡಿ ಸಮಸ್ಯೆ ಕಾಡುತ್ತಿದ್ದು, ಸಾವು-ನೋವು ಪ್ರಕರಣಗಳಿಗೆ ಸಾಕ್ಷಿಯಾಗಿದೆ. ಆ ಹಿನ್ನೆಲೆಯಲ್ಲಿ ಮೇಲ್ಸೇತುವೆಯಲ್ಲಿ ಮರುಡಾಂಬರೀಕರಣ ಕಾಮಗಾರಿ ಕೈಗೆತ್ತಿಕೊಳ್ಳಲು ಪಾಲಿಗೆ ಸಜ್ಜಾಗಿದೆ.
Related Articles
Advertisement
ಕಾಮಗಾರಿ ಹೇಗೆ ನಡೆಸಲಾಗುತ್ತದೆ: ಮೊದಲಿಗೆ ಕೆ.ಆರ್.ಮಾರುಕಟ್ಟೆಯಿಂದ ಮೈಸೂರು ರಸ್ತೆಯ ಕಡೆಗೆ ಹೋಗುವ ಪಥದಲ್ಲಿ ದುರಸ್ತಿ ನಡೆಯಲಿದೆ. ಅದರಂತೆ ರಾಯನ್ ವೃತ್ತದವರೆಗಿನ ಮೇಲ್ಸೇತುವೆಯ ಸಂಚಾರಕ್ಕೆ ಅವಕಾಶಕ್ಕೆ ಮಾಡಿಕೊಟ್ಟು, ನಂತರದಲ್ಲಿ ಮುಚ್ಚಲಾಗುತ್ತದೆ. ಎರಡನೇ ಹಂತದಲ್ಲಿ ಮೈಸೂರು ರಸ್ತೆಯಿಂದ ನಗರಕ್ಕೆ ಬರುವ ಮಾರ್ಗದಲ್ಲಿ ರಸ್ತೆಯ ಒಂದು ಭಾಗದಲ್ಲಿ ಕಾಮಗಾರಿ ನಡೆಸಲಿದ್ದಾರೆ. ಹೀಗಾಗಿ ಮೊದಲ ಹಂತದ ಕಾಮಗಾರಿ ನಡೆಯುವ ವೇಳೆ ಮೇಲ್ಸೇತುವೆಯಲ್ಲಿ ಎಡಕ್ಕೆ ತಿರುಗಿ ರಾಯನ್ ವೃತ್ತ ತಲುಪಿ, ಅಲ್ಲಿಂದ ಮೈಸೂರು ರಸ್ತೆಗೆ ತಲುಪಬೇಕಾಗುತ್ತದೆ.
ಠೇವಣಿ ಮುಟ್ಟುಗೋಲು: ಮೇಲ್ಸೇತುವೆ ದುರಸ್ತಿ ಕಾಮಗಾರಿಯನ್ನು 2014ರಲ್ಲಿ ಆರ್ ಟ್ರೆ ಇನ್ಫ್ರಾ ಪ್ರಾಜೆಕ್ಟ್ ಸಂಸ್ಥೆಗೆ ವಹಿಸಲಾಗಿತ್ತು. ಈ ವೇಳೆ ಮೇಲ್ಸೇತುವೆಯನ್ನು 5 ವರ್ಷ ನಿರ್ವಹಿಸುವ ಜವಾಬ್ದಾರಿಯನ್ನು ಸಂಸ್ಥೆಗೆ ನೀಡಲಾಗಿತ್ತು. ಆದರೆ, ಸಂಸ್ಥೆ ಟೆಂಡರ್ ಷರತ್ತುಗಳನ್ನು ಉಲ್ಲಂ ಸಿದ ಹಿನ್ನೆಲೆಯಲ್ಲಿ ಟೆಂಡರ್ ರದ್ದುಪಡಿಸಿದ ಅಧಿಕಾರಿಗಳು, ಕಂಪೆನಿಯ 11.13 ಲಕ್ಷ ರೂ. ಠೇವಣಿಯನ್ನು ಮುಟ್ಟುಗೋಲು ಹಾಕಿಕೊಂಡಿತ್ತು.
ರಸ್ತೆಗುಂಡಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಮೇಲ್ಸೇತುವೆ ಮರುಡಾಂಬರೀಕರಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಕಾಂಕ್ರಿಟ್ ರಸ್ತೆಯ ಮೇಲೆ ಸಾಮಾನ್ಯ ಡಾಂಬರು ಸರ್ಮಕವಾಗಿ ಉಳಿಯುವುದಿಲ್ಲ. ಹೀಗಾಗಿ ರಸ್ತೆಯ ಒಂದು ಪದರ ಡಾಂಬರು ತೆರವುಗೊಳಿಸಿ, 3 ಎಂಎಂ ದಪ್ಪದ ಟಿಕ್ಕಿಟಾರ್ ಶೀಟ್ ಹೊದಿಸಿದ ನಂತರದಲ್ಲಿ 40 ಎಂಎಂ ದಪ್ಪದ ಬಿಟುವಿನ್ ಹಾಕಲಾಗುತ್ತದೆ.-ಕೆ.ಟಿ.ನಾಗರಾಜ್, ಮುಖ್ಯ ಎಂಜಿನಿಯರ್ (ಯೋಜನೆ)