Advertisement

ಶಿರಸಿ: ಧರೆ ಕುಸಿದು ಮಣ್ಣಿನಡಿ ಸಿಲುಕಿದ್ದ ಮೂವರ ರಕ್ಷಣೆ

09:59 PM May 04, 2023 | Team Udayavani |

ಶಿರಸಿ: ಜೆಸಿಬಿ ಮೂಲಕ ಕಾರ್ಯನಿರ್ವಹಿಸುತ್ತಿದ್ದ ವೇಳೆ ಒಮ್ಮೆಲೆ ಧರೆ ಕುಸಿದು ಮಣ್ಣಿನಡಿ ಸಿಲುಕಿದ್ದ ಮೂವರನ್ನು ಅಗ್ನಿಶಾಮಕ ಸಿಬ್ಬಂದಿಗಳು ಕ್ಷಿಪ್ರ ಕಾರ್ಯಾಚರಣೆ ನಡೆಸಿ ರಕ್ಷಿಸಿದ ಘಟನೆ ತಾಲೂಕಿನ ಇಸಳೂರು ಬಪ್ಪನಳ್ಳಿಯಲ್ಲಿ ಘಟನೆ ನಡೆದಿದೆ.

Advertisement

ರಾಘವೇಂದ್ರ ಗೋಪಾಲ ನಾಯ್ಕ, ಹನುಮಂತ ರಾಜಪ್ಪ ಹರಿಜನ, ಇಮ್ರಾನ್ ಖಾನ್ ಎಂಬವರು ಮಣ್ಣಿನಡಿ‌ ಸಿಲುಕಿ ಬಚಾವ್ ಆಗಿದ್ದಾರೆ.

ಅಗ್ನಿಶಾಮಕ ವಿನಾಯಕ ಗೌಡ ನೇತೃತ್ವದಲ್ಲಿ ಚಾಲಕರಾದ ರಮೇಶ ಜಂಬಗಿ, ಸಾತೀತಪ್ಪ, ಸಿಬ್ಬಂದಿ ದುಂಡಪ್ಪ, ಈರಣ್ಣ ಜುಬೇರ್ ಮುಲ್ಲಾ, ಕೃಷ್ಣ ನಾಯಿಕ, ತಂತ್ರಜ್ಞ ಪ್ರವೀಣ ಇತರರು‌ ಮೂವರ ರಕ್ಷಣೆ ಮಾಡಿದರು.

ಇದನ್ನೂ ಓದಿ: Pakistan: ದುಷ್ಕರ್ಮಿಗಳಿಂದ ಗುಂಡಿನ ದಾಳಿ: ಪರೀಕ್ಷೆ ಸಿದ್ಧತೆಯಲ್ಲಿದ್ದ 7 ಶಿಕ್ಷಕರ ಹತ್ಯೆ

Advertisement

Udayavani is now on Telegram. Click here to join our channel and stay updated with the latest news.

Next