Advertisement

ಶಿರಸಿ: ಟ್ಯಾಂಕರ್-ಕಾರು ಮುಖಾಮುಖಿ ; 5 BJP ಕಾರ್ಯಕರ್ತರಿಗೆ ಗಾಯ

07:36 PM Apr 07, 2023 | Team Udayavani |

ಶಿರಸಿ: ಟ್ಯಾಂಕರ್ ಹಾಗೂ ಕಾರಿನ ನಡುವೆ ಮುಖಾಮುಖಿ ಢಿಕ್ಕಿಯಾಗಿ ಕಾರವಾರದ ಐವರು ಬಿಜೆಪಿ ಕಾರ್ಯಕರ್ತರು ಗಾಯಗೊಂಡಿರುವ ಘಟನೆ ತಾಲೂಕಿನ ಹಾರುಗಾರ್ ಬಳಿ ಶುಕ್ರವಾರ ನಡೆದಿದೆ.

Advertisement

ಕಾರಿನಲ್ಲಿದ್ದ ಕಾರವಾರದ ಬಿಜೆಪಿ ಕಾರ್ಯಕಾರಿಣಿ ಸದಸ್ಯ ನಿತಿನ್ ರಾಯ್ಕರ್ ಎಂಬುವವರ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡಕ್ಕೆ ರವಾನಿಸಲಾಗಿದೆ.

ಗಜಾನನ ರೇವಣಕರ್, ಸಂದೇಶ ಶೆಟ್ಟಿ, ವಿ.ಎಂ. ಹೆಗಡೆ , ಉಲ್ಲಾಸ ಖೇಣಿ ಎಂಬುವವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅವರನ್ನು ಶಿರಸಿ ಪಂಡಿತ್ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿರಸಿಯಲ್ಲಿ ನಡೆದ ಜಿಲ್ಲಾ ಕಾರ್ಯಾಗಾರವನ್ನು ಮುಗಿಸಿ ಕಾರವಾರಕ್ಕೆ ಹೋಗುವಾಗ ಈ ಅಪಘಾತ ಸಂಭವಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next