Advertisement

ಪರೇಶ್ ಸಾವು ದಳ್ಳುರಿಗೆ ಶಿರಸಿ ಉದ್ವಿಗ್ನ; ಗಾಳಿಯಲ್ಲಿ ಗುಂಡು

11:28 AM Dec 12, 2017 | Sharanya Alva |

ಉತ್ತರಕನ್ನಡ: ಕೋಮುದಳ್ಳುರಿಗೆ ತತ್ತರಿಸಿದ್ದ ಹೊನ್ನಾವರದ ಕಿಡಿ ಈಗ ಶಿರಸಿಯಾದ್ಯಂತ ವಿಸ್ತರಿಸಿದೆ. ಅನುಮಾನಾಸ್ಪದವಾಗಿ ಸಾವಿಗೀಡಾದ ಪರೇಶ್ ಮೇಸ್ತ ಸಾವು ಖಂಡಿಸಿ ಮಂಗಳವಾರ ನಡೆದ ಶಿರಸಿ ಬಂದ್ ಹಿಂಸಾರೂಪ ಪಡೆದಿದೆ. ಬಂದ್ ಹಿನ್ನೆಲೆಯಲ್ಲಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಕಿಡಿಗೇಡಿಗಳು ಪೊಲೀಸರ ಮೇಲೆ ಕಲ್ಲುತೂರಾಟ ನಡೆಸಿರುವ ಘಟನೆ ನಡೆದಿದೆ.

Advertisement

ಕಲ್ಲು ತೂರಾಟದ ಬಳಿಕ ಪೊಲೀಸರು ಪ್ರತಿಭಟನಾಕಾರರ ಮೇಲೆ ಅಶ್ರುವಾಯು ಪ್ರಯೋಗಿಸಿದ್ದಾರೆ. ಶಿರಸಿ ನಗರದ ವಿಕಾಸಾಶ್ರಮ ಮೈದಾನದಲ್ಲಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಕಲ್ಲುತೂರಾಟ ನಡೆಸಲಾಗಿತ್ತು. ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ನಡೆಸಿದ್ದು, ಬಳಿಕ ಗಾಳಿಯಲ್ಲಿ ಗುಂಡು ಹಾರಿಸಿ ಗುಂಪನ್ನು ಚದುರಿಸಿದ್ದಾರೆ.

ಕಾಗೇರಿ ಬಂಧನ:

ಪರೇಶ್ ಮೇಸ್ತ ಅನುಮಾನಾಸ್ಪದ ಸಾವುವನ್ನು ಖಂಡಿಸಿ ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಶಾಸಕ ವಿಶ್ಚೇಶ್ವರ ಹೆಗಡೆ ಕಾಗೇರಿ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next