Advertisement

50 ಬಿಹಾರಿ ಕಾರ್ಮಿಕರು ಸ್ವಗ್ರಾಮಕ್ಕೆ

06:17 PM May 17, 2020 | Naveen |

ಸಿರುಗುಪ್ಪ: ತಾಲೂಕಿನ ರೈಸ್‌ಮಿಲ್‌, ಹೋಟೆಲ್‌, ಕಲ್ಲು ಗಣಿ ಮುಂತಾದೆಡೆ ಕೆಲಸ ಮಾಡುತ್ತಿದ್ದ ಸುಮಾರು 50 ಬಿಹಾರಿ ಕಾರ್ಮಿಕರನ್ನು ಅವರ ರಾಜ್ಯಕ್ಕೆ ಕಳುಹಿಸಿಕೊಡಲು ಜಿಲ್ಲಾಡಳಿತ ವ್ಯವಸ್ಥೆ ಮಾಡಿದೆ ಎಂದು ತಹಶೀಲ್ದಾರ್‌ ಎಸ್‌.ಬಿ. ಕೂಡಲಗಿ ತಿಳಿಸಿದರು.

Advertisement

ನಗರದ ತಹಶೀಲ್ದಾರ್‌ ಕಚೇರಿ ಆವರಣದಲ್ಲಿ ಬಿಹಾರಿಗಳನ್ನು ಬಸ್‌ ಮೂಲಕ ಶನಿವಾರ ಬಳ್ಳಾರಿಗೆ ಕಳುಹಿಸಿ ಅವರು ಮಾತನಾಡಿದರು. ದೇಶಾದ್ಯಾಂತ ಕೋವಿಡ್‌-19 ಹೆಚ್ಚಾಗುತ್ತಿರುವುದರಿಂದ ಬಿಹಾರಿಗಳು ತಾಲೂಕು ಕಚೇರಿಗೆ ಬಂದು ತಮ್ಮನ್ನು ತಮ್ಮ ರಾಜ್ಯಕ್ಕೆ ಹೋಗಲು ಅನುಮತಿ ನೀಡುವಂತೆ ಕೇಳಿದ್ದರಿಂದ ಸೇವಾ ಕೇಂದ್ರದಲ್ಲಿ ಅಗತ್ಯ ದಾಖಲೆಗಳನ್ನು ಸಲ್ಲಿಸುವಂತೆ ಸೂಚಿಸಲಾಗಿತ್ತು. ಅದರಂತೆ ಜಿಲ್ಲಾಧಿಕಾರಿಗಳು ಅನುಮತಿ ನೀಡಿದ್ದರಿಂದ ಜಿಲ್ಲಾ ಕೇಂದ್ರಕ್ಕೆ ಕಳುಹಿಸಲಾಗಿದೆ. ಪ್ರತಿಯೊಬ್ಬರ ಆರೋಗ್ಯ ತಪಾಸಣೆ ನಡೆಸಿ ರೈಲು ಮುಖಾಂತರ ಅವರ ರಾಜ್ಯಕ್ಕೆ ಕಳುಹಿಸಲು ಜಿಲ್ಲಾಧಿಕಾರಿಗಳು ವ್ಯವಸ್ಥೆ ಮಾಡಿದ್ದಾರೆ. ಬಿಹಾರಿಗಳಿಗೆ ಪ್ರತಿಯೊಬ್ಬರೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು, ಮಾಸ್ಕ್ ಧರಿಸಬೇಕು, ನಿಮ್ಮ ಗ್ರಾಮಗಳಿಗೆ ತೆರಳಿದ ಮೇಲೆ ಮನೆಯಲ್ಲಿಯೇ ಇರಬೇಕೆಂದು ತಿಳಿಸಲಾಗಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next