Advertisement

Tragedy: ತಮ್ಮನ ಸಾವಿನ ಸುದ್ದಿ ಕೇಳಿ ಅಕ್ಕನಿಗೂ ಹೃದಯಾಘಾತ… ಸಾವಿನಲ್ಲೂ ಒಂದಾದ ಅಕ್ಕ-ತಮ್ಮ

05:27 PM Oct 11, 2024 | Team Udayavani |

ಸಿರುಗುಪ್ಪ: ತಾಲೂಕಿನ ಕರೂರು ಗ್ರಾಮದಲ್ಲಿ ಒಂದೇ ಕುಟುಂಬದ ಅಕ್ಕ, ತಮ್ಮ ಹೃದಯಾಘಾತದಿಂದ ಸಾವನ್ನಪ್ಪಿದ ಹೃದಯ ವಿದ್ರಾಹಕ ಘಟನೆ ನಡೆದಿದೆ.

Advertisement

ಗುರುವಾರ ರಾತ್ರಿ ಮಲ್ಲಯ್ಯ (54) ಎನ್ನುವ ವ್ಯಕ್ತಿಯು ಹೃದಯಾಘಾತದಿಂದ ನಿಧನ ಹೊಂದಿದ್ದು, ಈ ವಿಷಯವನ್ನು ಮೃತ ಮಲ್ಲಯ್ಯನ ಅಕ್ಕ ಮಲ್ಲಮ್ಮನಿಗೆ ಶುಕ್ರವಾರ ಬೆಳಿಗ್ಗೆ ತಿಳಿಸಲಾಯಿತು. ತಮ್ಮನ ಸಾವಿನ ವಿಷಯ ತಿಳಿದ ಮಲ್ಲಮ್ಮ(58) ಶುಕ್ರವಾರ ಬೆಳಿಗ್ಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಒಂದೇ ಕುಟುಂಬದ ಇಬ್ಬರು ಸದಸ್ಯರು ಹೃದಯಾಘಾತದಿಂದ ಸಾವನ್ನಪ್ಪಿದ್ದು, ಕುಟುಂಬ ಸದಸ್ಯರಿಗೆ ತೀವ್ರ ಆಘಾತವನ್ನುಂಟುಮಾಡಿತ್ತು, ಇದರಿಂದಾಗಿ ಗ್ರಾಮದಲ್ಲಿ ನೀರವ ಮೌನ ಆವರಿಸಿತ್ತು.

ಮೃತರ ಅಂತ್ಯಕ್ರಿಯೆ ಶುಕ್ರವಾರ ಗ್ರಾಮದ ವೀರಶೈವ ರುದ್ರಭೂಮಿಯಲ್ಲಿ ನಡೆಯಿತು. ಮೃತ ಮಲ್ಲಮ್ಮ ಮೂವರು ಪುತ್ರರು, ಒಬ್ಬ ಪುತ್ರಿ, ಮತ್ತು ಮೃತ ಮಲ್ಲಯ್ಯ ಪತ್ನಿ, ಮೂವರು ಪುತ್ರಿಯರು, ಒಬ್ಬ ಪುತ್ರನನ್ನು ಅಗಲಿದ್ದಾರೆ.

ಇದನ್ನೂ ಓದಿ: Chikkamagaluru: ಮುಳ್ಳಯ್ಯನಗಿರಿಯಲ್ಲಿ 250 ಅಡಿ ಪ್ರಪಾತಕ್ಕೆ ಬಿದ್ದ ಕಾರು… ಐವರು ಗಂಭೀರ

Advertisement

Udayavani is now on Telegram. Click here to join our channel and stay updated with the latest news.

Next