Advertisement

Siruguppa: ಲಾರಿ-ಸ್ಕೂಟಿ ಅಪಘಾತ; ಸವಾರ ಸ್ಥಳದಲ್ಲೇ ಸಾವು

01:10 PM Aug 15, 2024 | Team Udayavani |

ಸಿರುಗುಪ್ಪ: ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಗರದ ಕನಕದಾಸ ವೃತ್ತದ ಬಳಿ ಆ.15ರ ಗುರುವಾರ ನಡೆದಿದೆ.

Advertisement

ದ್ವಿಚಕ್ರ ವಾಹನ ಚಾಲಕ, ತಾಲೂಕಿನ ಇಬ್ರಾಹಿಂಪುರ ಗ್ರಾಮದ ನಾಗನಗೌಡ (65) ಸ್ಥಳದಲ್ಲೇ ಮೃತಪಟ್ಟವರು.

ಬಳ್ಳಾರಿಯಿಂದ ಬರುತ್ತಿದ್ದ ಲಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಸವಾರನ ತಲೆಗೆ ತೀವ್ರ ಗಾಯಗಳಾಗಿರುವುದು ಸಾವಿಗೆ ಕಾರಣ ಎಂದು ಹೇಳಲಾಗಿದೆ.

ಸ್ಥಳಕ್ಕೆ ಬಂದ ಸಿರುಗುಪ್ಪ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ ಮಾಹಿತಿ ಪಡೆದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next