Advertisement

ಶ್ರೀಕಿ ನಿವಾಸಕ್ಕೆ SIT ದಾಳಿ

12:49 AM Sep 13, 2023 | Team Udayavani |

ಬೆಂಗಳೂರು: ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದಿದ್ದ ಬಿಟ್‌ಕಾಯಿನ್‌ ಹಗರಣದ ತನಿಖೆ ನಡೆಸುತ್ತಿರುವ ಸಿಐಡಿಯ ವಿಶೇಷ ತನಿಖಾ ದಳ (ಎಸ್‌ಐಟಿ) ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿ ನಿವಾಸದ ಮೇಲೆ ದಾಳಿ ನಡೆಸಿದೆ.

Advertisement

ಕೋರ್ಟ್‌ನಿಂದ ಸರ್ಚ್‌ ವಾರಂಟ್‌ ಪಡೆದು ಈ ಕ್ರಮ ಕೈಗೊಳ್ಳಲಾಗಿದೆ. ಒಟ್ಟು ಮೂವರ ಮನೆಗಳಲ್ಲಿ ಶೋಧ ನಡೆಸಲಾಗಿದೆ.

ಜಯನಗರದಲ್ಲಿರುವ ಶ್ರೀಕೃಷ್ಣನ ಮನೆ, ಕೃತ್ಯದಲ್ಲಿ ಆತನಿಗೆ ಸಹಕಾರ ನೀಡಿದ ಆರೋಪದ ಮೇಲೆ ಸಂಜಯನಗರ ನಿವಾಸಿ ಸುನೀಶ್‌ ಹೆಗ್ಡೆ, ಸದಾಶಿವನಗರದಲ್ಲಿರುವ ಪ್ರಸಿದ್ಧ್ ಶೆಟ್ಟಿ ಮನೆಗಳ ಮೇಲೆ ದಾಳಿ ನಡೆಸಲಾಗಿದ್ದು, ಕೆಲವು ದಾಖಲೆಗಳು ಸಿಕ್ಕಿವೆ ಎಂದು ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next