Advertisement

ಮತ್ತೊಂದು ಗಣಿ ಸಂಕಷ್ಟ;ರೆಡ್ಡಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ SIT

06:30 PM Dec 27, 2018 | Team Udayavani |

ಬೆಂಗಳೂರು:ಬಳ್ಳಾರಿಯಲ್ಲಿ ಅಕ್ರಮ ಅದಿರು ಗಣಿಗಾರಿಕೆ ನಡೆಸಿದ ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಚಾರ್ಜ್ ಶೀಟ್ ಸಲ್ಲಿಸಿದೆ.

Advertisement

ಶೇಖ್ ಸಾಬ್ ಅವರಿಂದ ಗಣಿ ಕಂಪನಿ ಗುತ್ತಿಗೆ ಪಡೆದು ಅಕ್ರಮ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಎಸ್ ಐಟಿ ತನಿಖಾ ತಂಡ ತನಿಖೆ ನಡೆಸಿತ್ತು. ಇದೀಗ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ನಲ್ಲಿರುವ ವಿಶೇಷ ಕೋರ್ಟ್ ಗೆ ಆರೋಪ ಪಟ್ಟಿ ಸಲ್ಲಿಸಿದೆ ಎಂದು ವರದಿ ತಿಳಿಸಿದೆ.

ಚಾರ್ಜ್ ಶೀಟ್ ನಲ್ಲಿ ಜನಾರ್ದನ ರೆಡ್ಡಿ ಎ1 ಆರೋಪಿಯಾಗಿ, ಅಲಿಖಾನ್ ಎ2 ಹಾಗೂ ಶ್ರೀನಿವಾಸ್ ರೆಡ್ಡಿ ಎ3 ಆರೋಪಿಯನ್ನಾಗಿ ಉಲ್ಲೇಖಿಸಲಾಗಿದೆ. ಆದರೆ ಖಾರದಪುಡಿ ಮಹೇಶ್ ಸೇರಿದಂತೆ ಹಲವರ ಹೆಸರು ಆರೋಪಪಟ್ಟಿಯಲ್ಲಿ ಕೈಬಿಡಲಾಗಿದೆ ಎಂದು ವರದಿ ವಿವರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next