Advertisement
ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಎಸ್ಐಟಿ ಅವಧಿಯನ್ನು 2019ರ ಜ. 24ರವರೆಗೆ ವಿಸ್ತರಿಸಲು ಒಪ್ಪಿಗೆ ನೀಡಲಾಗಿದೆ. ಇದರೊಂದಿಗೆ ಅಗತ್ಯ ಬಿದ್ದರೆ ಎಸ್ಐಟಿಯನ್ನು ಇನ್ನಷ್ಟು ಬಲಗೊಳಿಸುವ ಬಗ್ಗೆಯೂ ತೀರ್ಮಾನಿಸಲಾಗಿದೆ. ಸಂಪುಟ ಸಭೆ ನಂತರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ ಈ ಕುರಿತು ಮಾಹಿತಿ ನೀಡಿದರು.
ಈಗಾಗಲೇ ಎಸ್ಐಟಿ ನಡೆಸುತ್ತಿರುವ ತನಿಖೆಯೂ ಪೂರ್ಣಗೊಳ್ಳದ ಕಾರಣ ಅವಧಿ ವಿಸ್ತರಿಸಲಾಗಿದೆ. ಜತೆಗೆ ಇದೀಗ ಎಸ್ಐಟಿ ಮುಂದೆ ಸಾಕಷ್ಟು ಪ್ರಕರಣಗಳು ಬಾಕಿ ಇರುವುದರಿಂದ ಅದನ್ನು ಮತ್ತಷ್ಟು ಬಲವರ್ದನೆಗೊಳಿಸುವ ಬಗ್ಗೆಯೂ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ. ಈ ಕುರಿತು ಎಸ್ಐಟಿಯಿಂದ ಬೇಡಿಕೆ ಬಂದಲ್ಲಿ ಅದನ್ನು ಪರಿಗಣಿಸಲು ತೀರ್ಮಾನಿಸಲಾಗಿದೆ. ಸಿಬಿಐ, ಕಾರವಾರ
ಮತ್ತು ಮಂಗಳೂರು ಬಂದರುಗಳ ಮೂಲಕ ಒಟ್ಟು 1028 ಶಿಪ್ಮೆಂಟ್ಗಳಲ್ಲಿ ಸಾಗಣೆಯಾದ 2.86 ಕೋಟಿ ಮೆಟ್ರಿಕ್ ಟನ್ ಅದಿರಿಗೆ ಸಂಬಂಧಿಸಿದ 76 ಪ್ರಕರಣ ಗಳನ್ನು ಕೈಬಿಟ್ಟಿದ್ದು, ಈ ಎಲ್ಲವನ್ನೂ ಎಸ್ಐಟಿ ತನಿಖೆಗೆ ವಹಿಸಲಾಗಿದೆ. ಇನ್ನೊಂದೆಡೆ ಎಸ್ಐಟಿಯಲ್ಲೇ ದಾಖಲಾದ 73 ಕೇಸ್ಗಳಲ್ಲಿ 28 ಪ್ರಕರಣಗಳಲ್ಲಿ ಆರೋಪಪಟ್ಟಿ ದಾಖಲಿಸಲಾ ಗಿದೆ. ಪ್ರಸ್ತುತ ತನಿಖೆ ಹಂತದಲ್ಲಿರುವ 26 ಪ್ರಕರಣಗಳ ಪೈಕಿ 5 ಪ್ರಕರಣಗಳಿಗೆ ಇನ್ನೂ ಪ್ರಾಸಿಕ್ಯೂಷನ್ಗೆ ಸರ್ಕಾರದ ಅನುಮತಿ ಸಿಕ್ಕಿಲ್ಲ. 3 ಪ್ರಕರಣಗಳಲ್ಲಿ ನ್ಯಾಯಾಲಯದ ತಡೆಯಾಜ್ಞೆ ಇದೆ. ಉಳಿದ 19 ಪ್ರಕರಣಗಳ ವಿಚಾರಣೆ ನಡೆಯುತ್ತಿದೆ. ಈ ಎಲ್ಲಾ ಪ್ರಕರಣವನ್ನು ಮುಕ್ತಾಯ ಗೊಳಿಸುವ ಉದ್ದೇಶದಿಂದ ಎಸ್ಐಟಿ ಕಾರ್ಯಾವಧಿಯನ್ನು 1 ವರ್ಷ ವಿಸ್ತರಿಸಲಾಗಿದೆ.
Related Articles
Advertisement