Advertisement
ಜಗನ್ ರೆಡ್ಡಿ ಸರ್ಕಾರದ ಅವಧಿಯಲ್ಲಿ ತುಪ್ಪ ಖರೀದಿ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ನಿಯಮಗಳನ್ನು ಉಲ್ಲಂಘಿ ಸಲಾಗಿದೆ. ಜತೆಗೆ ಟಿಟಿಡಿ ಮಂಡಳಿಯ ನೇಮಕಾತಿಯಲ್ಲೂ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದಾರೆ.
ಐ.ಜಿ. ಮಟ್ಟದ ಅಧಿಕಾರಿ ಎಸ್ಐಟಿಯ ನೇತೃತ್ವ ವಹಿಸಲಿದ್ದಾರೆ ಎಂದು ನಾಯ್ಡು ಹೇಳಿದ್ದಾರೆ. ಎಸ್ಐಟಿ ತನಿಖೆಗಾಗಿ ಸುಪ್ರೀಂನಲ್ಲಿ ಪಿಐಎಲ್: ತಿರುಪತಿ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಬಗ್ಗೆ ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖೆ ನಡೆಸಬೇಕೆಂದು ಕೋರಿ ಸುಪ್ರೀಂ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ.
Related Articles
ತಿರುಪತಿ ಲಡ್ಡು ಪ್ರಸಾದದಲ್ಲಿ ಬೀಫ್ನ ಅಂಶ ಬಳಕೆ ಮಾಡಲಾಗಿದೆ ಎಂಬ ವಿಚಾರ ಅತ್ಯಂತ ಅಸಹ್ಯಕರವಾಗಿದೆ ಎಂದು ಸದ್ಗುರು ವಾಸು ದೇವ್ ಹೇಳಿದ್ದಾರೆ. ದೇಗುಲಗಳ ಆಡಳಿತ ವನ್ನು ಭಕ್ತರು ನಿರ್ವಹಿಸಬೇಕು. ಸರ್ಕಾರ ಅಲ್ಲ. ಎಲ್ಲಿ ಭಕ್ತಿ ಇಲ್ಲವೇ ಅಲ್ಲಿ ಪಾವಿತ್ರ್ಯತೆಯನ್ನು ನಿರಿಕ್ಷಿಸು ವುದೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
Advertisement