Advertisement

ಶಿವಗಂಗೆಯ ಗಂಗಾಧರ 

11:19 AM Mar 10, 2018 | |

ದಕ್ಷಿಣ ಕಾಶಿ ಎಂದೇ ಹೆಸರಾಗಿರುವ ಶಿವಗಂಗೆ ಬೆಟ್ಟ, ಒಂದೊಂದು ದಿಕ್ಕಿನಿಂದ ಒಂದೊಂದು ರೂಪದಲ್ಲಿ ಗೋಚಸಿರುತ್ತದೆ. ಇಲ್ಲಿರುವ ಪಾತಾಳಗಂಗೆಯಲ್ಲಿ ಮಳೆಗಾಲದಲ್ಲಿ ಆಳಕ್ಕೆ ಹೋಗುವ ನೀರು, ಬೇಸಿಗೆಯಲ್ಲಿ ಮೇಲೆ ಬಂದಿರುತ್ತದೆ !

Advertisement

ಬೆಂಗಳೂರು ನಗರದಿಂದ ಸುಮಾರು 54 ಕಿ.ಮೀ. ದೂರದಲ್ಲಿರುವ ಒಂದು ಪಾವನ ಪುಣ್ಯ ಕ್ಷೇತ್ರವೇ ಈ ಶಿವಗಂಗೆ ಬೆಟ್ಟ.  ಇದು  ಕರ್ನಾಟಕದ ಪ್ರಮುಖ ಯಾತ್ರಾ ಸ್ಥಳವೂ ಆಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸವಾಲಾಗಿರುವ ಸಂಗತಿಗಳಲ್ಲಿ ಈ ಶಿವಗಂಗೆಯ ಲಿಂಗ ಮಹಾತೆ¾ಯೂ ಒಂದು.  ಇಲ್ಲಿರುವ ಈಶ್ವರ ಲಿಂಗಕ್ಕೆ ತುಪ್ಪವನ್ನು ಹಚ್ಚಿದರೆ ಅದು ಬೆಣ್ಣೆಯಾಗಿ ಪರಿವರ್ತನೆಯಾಗುತ್ತದೆ.  ಬೆಣ್ಣೆಯನ್ನು ಒಲೆಯ ಮೇಲಿಟ್ಟು ಕಾಯಿಸಿ, ಕರಗಿಸಿದರೆ ಅದು ತುಪ್ಪವಾಗುತ್ತದೆ. ವಾಸ್ತವ ಏನೆಂದರೆ, ನಮಗೆಲ್ಲ ಗೊತ್ತಿರುವಂತೆ ಒಮ್ಮೆ ತುಪ್ಪವಾದ ಬೆಣ್ಣೆಯನ್ನು ಪ್ರಿಡ್ಜ್‌ನಲ್ಲಿ ಇಟ್ಟರೂ ಅದು ಮತ್ತೆ ಬೆಣ್ಣೆಯಾಗುವುದು ಅಸಾಧ್ಯದ ಮಾತು. ಆದರೆ, ಈ ಶಿವಗಂಗೆಯಲ್ಲಿ ಈ ಪವಾಡವನ್ನು ಪ್ರತ್ಯಕ್ಷ ಕಾಣಬಹುದು. ಭಗವಂತನ ಕೃಪೆ ಇದ್ದರೆ ಯಾವುದೂ ಅಸಾಧ್ಯವಲ್ಲ ಎಂಬ ಮಾತು ಇದಕ್ಕೆ ಅನ್ವಯಿಸುತ್ತದೆ. ಇಂಥ ವೈಶಿಷ್ಟ್ಯ ಪೂರ್ಣ ಪುಣ್ಯಕ್ಷೇತ್ರ ಕರ್ನಾಟಕದಲ್ಲಿದೆ ಎಂಬುದೇ  ಹೆಮ್ಮೆಯ ವಿಷಯ.

 ಈ ಬೆಟ್ಟದ ಮೇಲೆ ಅಷ್ಟಲಿಂಗ, ಅಷ್ಟಗಣಪ,ಅಷ್ಟ ವೃಷಭ, ಅಷ್ಟತೀರ್ಥಗಳಿವೆ. ಶಿವಗಂಗೆಯ ಪ್ರಸ್ತಾಪ ಪುರಾಣ ಹಾಗೂ ಗುರುಚರಿತ್ರೆಯಲ್ಲೂ ಬರುತ್ತದೆ. ಹೊಯ್ಸಳರ ಕಾಲದ ವಿಷ್ಣುವರ್ಧನ ಹಾಗೂ ಬೆಂಗಳೂರು ನಿರ್ಮಾತೃ ಕೆಂಪೇಗೌಡರು ಈ ದೇವಾಲಯವನ್ನು ಜೀರ್ಣೋದ್ಧಾರ ಮಾಡಿ¨ªಾರೆ ಎನ್ನಲಾಗುತ್ತದೆ.  ಇಲ್ಲಿ ಸ್ವರ್ಣಾಂಭ ಸಹಿತ ಗಂಗಾಧರೇಶ್ವರ, ಶಾಂತೇಶ್ವರ, ಓಂಕಾರೇಶ್ವರ, ರೇವಣ ಸಿದ್ಧೇಶ್ವರ, ಕುಂಬೇಶ್ವರ, ಸೋಮೇಶ್ವರ, ಮುದ್ದು ವೀರೇಶ್ವರನೆಂಬ ಅಷ್ಟ ಲಿಂಗಗಳಿವೆ.  ಅಗಸ್ತ್ಯ, ಶಂಕರತೀರ್ಥ, ಕಣ್ವತೀರ್ಥ, ಕದಂಬತೀರ್ಥ, ಮೈತ್ಲಾ ತೀರ್ಥ, ಪಾತಾಳಗಂಗೆ, ಒರಳಕಲ… ತೀರ್ಥ, ಕಪಿಲತೀರ್ಥ ಎಂಬ ಅಷ್ಟ ತೀರ್ಥಗಳು ಮತ್ತು 108 ಶಿವಲಿಂಗಗಳಿವೆ.   ಇದಲ್ಲದೆ, ನಂದಿ, ವೃಷಭ, ಮಕರಬಸವ, ಮಹಿಷ ಬಸವ, ಗಾರೆ ಬಸವ, ದೊಡ್ಡ ಬಸವ, ಕಡಲೆ ಬಸವ, ಗಿರಿಬಸವ, ಕೋಡುಗಲ್ಲು ಬಸವ ಎಂಬ ಅಷ್ಟ ಮಹಾ ವೃಷಭಗಳೂ ಇಲ್ಲಿವೆ.   ಇನ್ನು  ಈ ಬೆಟ್ಟದ ಮೇಲೆ ಒಂದು ಸಣ್ಣ ಸುರಂಗವಿದೆ. ಈ ಸುರಂಗದಲ್ಲಿ ಮುಂದುವರೆದರೆ ಶ್ರೀರಂಗಪಟ್ಟಣ ತಲುಪಬಹುದು ಎಂಬ ನಂಬಿಕೆಯೂ ಚಾಲ್ತಿಯಲ್ಲಿದೆ.  ಬೆಟ್ಟದ ಮೇಲಿರುವ  ಒರಳಕಲ್ಲು ತೀರ್ಥದಲ್ಲಿ   ವರ್ಷದ 365 ದಿನಗಳೂ ನೀರು ದೊರೆಯುತ್ತದೆ. ಕಡಿದಾದ ಬೆಟ್ಟವನ್ನು ಏರುತ್ತಾ ಹೋದರೆ ಒಂದು ಎತ್ತರವಾದ ಬಂಡೆಯ ಮೇಲೆ ನಂದಿ ವಿಗ್ರಹವಿದೆ. ಇದನ್ನು ಪ್ರದಕ್ಷಿಣೆ ಹಾಕುವುದೇ ಒಂದು ಸಾಹಸದ ಕೆಲಸ. ಕಾಲು ಇಡಲು ಕೂಡ ಜಾಗ ಚಿಕ್ಕದು ಹಾಗೂ ಮತ್ತೂಂದು ಕಡೆ ಆಳವಾದ ಪ್ರಪಾತ. ನಂತರ ಹಾಗೇ ಮುಂದುವರೆದರೆ ಬೆಟ್ಟದ ಮೇಲೆ ಗಂಗಾಧರೇಶ್ವರನ ಸುಂದರವಾದ ದೇವಾಲಯವಿದೆ. ಇಲ್ಲಿನ ಗರ್ಭಗುಡಿಯಲ್ಲಿ  ಗಂಗಾಧರೇಶ್ವರ  ಲಿಂಗರೂಪದಲ್ಲಿ  ನೆಲೆಸಿದ್ದಾನೆ.  

Advertisement

ಮುಖ್ಯವಾದದ್ದು ಈ  ಬೆಟ್ಟದ ಮೇಲಿರುವ ಶ್ರೀ ಹೊನ್ನಾದೇವಿ ದೇವಸ್ಥಾನವೂ ಪ್ರತಿ ವರ್ಷ ಸಂಕ್ರಾಂತಿ ಹಬ್ಬದ ದಿನ ಎರಡೂ ದೇವರುಗಳಿಗೆ ವಿವಾಹ ಮಹೋತ್ಸವವನ್ನು ಮಾಡಲಾಗುತ್ತದೆ. ಆ ದಿನ ಮುಂಜಾನೆ, ಬೆಟ್ಟದ ಮೇಲಿನ ಕಲ್ಲಿನಿಂದ ಗಂಗಾ ಜಲ ಹೊರ ಹೊಮ್ಮುತ್ತದೆ. ಆದೇ ಜಲವನ್ನು ವಾದ್ಯಗೋಷ್ಟಿಗಳ ಸಮೇತ ತಂದು ಆ ಪವಿತ್ರ ನೀರಿನಿಂದ ಶ್ರೀಹೊನ್ನಾದೇವಿಯನ್ನು ಶ್ರೀ ಗಂಗಾಧರೇಶ್ವರನಿಗೆ ಧಾರೆ ಎರೆದು ಕೊಡಲಾಗುತ್ತದೆ. ಇನ್ನು  ಇಲ್ಲಿ ಶಂಕರಾಚಾರ್ಯರ ಶಾಖಾ ಮಠ, ಶಾರದಾಂಬೆಯ ದೇವಸ್ಥಾನ, ಬೃಹದಾಕಾರವಾದ ತೋಪಿನ ಗಣೇಶ ಹಾಗೂ 108 ಲಿಂಗಗಳನ್ನುಳ್ಳ ಅಗಸ್ತ್ಯ ದೇವಸ್ಥಾನಗಳಿವೆ.  

ಹತ್ತಿರದಲ್ಲಿಯೇ ಪಾತಾಳ ಗಂಗೆ ಇದೆ. ಇದು ಸದಾ ನೀರಿನಿಂದ ತುಂಬಿರುತ್ತದೆ. ವಿಚಿತ್ರವೆಂದರೆ ಇಲ್ಲಿ ಮಳೆಗಾಲದಲ್ಲಿ ನೀರು ಆಳಕ್ಕೆ ಹೋಗಿರುತ್ತದೆ. ಬೇಸಿಗೆಯಲ್ಲಿ ನೀರು ಮೇಲಕ್ಕೆ ಬರುತ್ತದೆ. ಈ ಕ್ಷೇತ್ರವನ್ನು  ದಕ್ಷಿಣ ಕಾಶಿ ಎಂದೂ ಕೂಡ ಕರೆಯುತ್ತಾರೆ.  ಒಂದೊಂದು ದಿಕ್ಕಿನಿಂದ ಒಂದೊಂದು ಆಕಾರದಲ್ಲಿ ಗೋಚರಿಸುವ ಈ ಬೆಟ್ಟವನ್ನು ಉತ್ತರದಿಂದ ನೋಡಿದರೆ ಸರ್ಪದಂತೆಯೂ, ದಕ್ಷಿಣದಿಂದ ಗಣೇಶನಂತೆಯೂ, ಪೂರ್ವದಿಂದ ನಂದಿಯಂತೆಯೂ, ಪಶ್ಚಿಮದಿಂದ ಲಿಂಗದಂತೆಯೂ ಕಾಣುತ್ತದೆ.  ಚಾರಣ ಪ್ರಿಯರಿಗೆ ಹೇಳಿ ಮಾಡಿಸಿದ ತಾಣ ಇದಾಗಿದೆ. ಇದೇ ಬೆಟ್ಟದÇÉೇ ನಾಟ್ಯರಾಣಿ ಶಾಂತಲೆ ಆತ್ಮಹತ್ಯೆ ಮಾಡಿಕೊಂಡಿದ್ದು ಎಂಬ ಐತಿಹ್ಯವಿದೆ.

 ತಲುಪುವ ಮಾರ್ಗ 
ಬೆಂಗಳೂರು ನಗರದಿಂದ ಸುಮಾರು 54 ಕಿಮೀ. ದಾಬಸ್‌ ಪೇಟೆಯಿಂದ ಸುಮಾರು 6 ಕಿ.ಮೀ. ತುಮಕೂರಿನಿಂದ 20 ಕಿ.ಮೀ. ಅಂತರದಲ್ಲಿರುವ ಈ ಬೆಟ್ಟಕ್ಕೆ  ಸಾಕಷ್ಟು ಬಸ್‌ ಸೌಕರ್ಯವಿದೆ.

ಆಶಾ. ಎಸ್‌ ಕುಲಕರ್ಣಿ

Advertisement

Udayavani is now on Telegram. Click here to join our channel and stay updated with the latest news.

Next