Advertisement

ವಾಹನ ಅಡ್ಡಗಟ್ಟಿ ಸುಲಿಗೆ ಪ್ರಕರಣ: ಮಂಗಳೂರಿನಲ್ಲಿ ಮತ್ತೆ ಆರು ಖದೀಮರ ಬಂಧನ

03:31 PM Apr 15, 2021 | Team Udayavani |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾಹನ ಸವಾರರನ್ನುಅಡ್ಡಗಟ್ಟಿ ಸುಲಿಗೆ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಮತ್ತೆ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

Advertisement

ಜಿಲ್ಲೆಯ ಮೂಡಬಿದಿರೆ, ಮೂಲ್ಕಿ, ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳ್ಳತನ, ದರೋಡೆ ಮಾತ್ರವಲ್ಲದೆ, ವಾಹನ ಸವಾರರನ್ನು ಅಡ್ಡಗಟ್ಟಿ ಹಣ ವಸೂಲಿ ಮಾಡುತ್ತಿದ್ದ ಪ್ರಕರಣದಲ್ಲಿ ಝಬೈರ್, ಇಬ್ರಾಹಿಂ, ಲತೀಪ್, ರಾಕೇಶ್ ಸೇರಿದಂತೆ ಒಟ್ಟು 6 ಜನರನ್ನ ಬಂಧನ ಮಾಡಲಾಗಿದೆ.

ಇದನ್ನೂ ಓದಿ:12 ವರ್ಷಗಳ ನಂತರ ಕೂದಲನ್ನು ಕತ್ತರಿಸಿಕೊಂಡ ಯುವತಿ : ಕೂದಲ ಉದ್ದ ಎಷ್ಟಿದೆ ಗೊತ್ತಾ?

ಬಂಧಿತರಿಂದ ಕಾರು, ಏರ್ ಗನ್, ಚಿನ್ನಾಭರಣ ಸಹಿತ 41.82 ಲಕ್ಷ ರೂ. ಮೌಲ್ಯದ ಸೊತ್ತನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Advertisement

ದ.ಕನ್ನಡ, ಬೆಂಗಳೂರು, ಹಾಸನ, ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಲ್ಲೂ ಈ ಆರೋಪಿಗಳ ವಿರುದ್ಧ ಮೇಲೆ ಪ್ರಕರಣ ದಾಖಲಾಗಿದೆ. ಈ ತಂಡದಲ್ಲಿ ಒಟ್ಟು 60 ಕ್ಕೂ ಜನರು ಸೇರಿ ಇಂತಹ ಕೃತ್ಯವನ್ನು ಮಾಡತ್ತಿದ್ದರು ಎಂದು ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಪತ್ರಿಕಾಗೋಷ್ಠಿಯಲ್ಲಿ ತಿಳಸಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next