Advertisement

ಮಾಜಿ ನೌಕಾಪಡೆ ಅಧಿಕಾರಿಯ ಮೇಲೆ ಹಲ್ಲೆ: ಶಿವಸೇನೆ ಕಾರ್ಯಕರ್ತರಿಬ್ಬರು ಸೇರಿ ಆರು ಮಂದಿಯ ಬಂಧನ

01:44 PM Sep 12, 2020 | keerthan |

ಮುಂಬೈ: ಮಾಜಿ ನೌಕಾಪಡೆಯ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಶಿವಸೇನೆ ಕಾರ್ಯಕರ್ತರಿಬ್ಬರು ಸೇರಿ ಆರು ಮಂದಿಯನ್ನು ಮುಂಬೈ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

Advertisement

ಶಿವಸೇನೆಯ ಶಾಖಾ ಪ್ರಮುಖ್ ಕಮಲೇಶ್ ಕದಂ ಮತ್ತು ಓರ್ವ ಕಾರ್ಯಕರ್ತನನ್ನು ಬಂಧಿಸಲಾಗಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಕಾರ್ಟೂನ್ ಒಂದನ್ನು ಶೇರ್ ಮಾಡಿದ ಕಾರಣಕ್ಕೆ ಶಿವಸೇನೆ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ನೌಕಾಪಡೆ ಮಾಜಿ ಅಧಿಕಾರಿ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸಮತಾ ನಗರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದಾದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಮುಗಿಯದ ಮಹಾರಾಷ್ಟ್ರ ಸರಕಾರ – ಬಾಲಿವುಡ್‌ ನಟಿ ಜಟಾಪಟಿ: ಸೋನಿಯಾ ಮಧ್ಯ ಪ್ರವೇಶಕ್ಕೆ ಆಗ್ರಹ

Advertisement

ನೌಕಾ ಪಡೆಯ ಮಾಜಿ ಅಧಿಕಾರಿಯ ಮೇಲೆ ಹಲ್ಲೆ ನಡೆಸುವ ವಿಡಿಯೂ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next