Advertisement

Rajasthan ಅಪಘಾತ: ಆರು ಪೊಲೀಸರ ಸಾವು

11:35 PM Nov 19, 2023 | Team Udayavani |

ಜೈಪುರ: ರಾಜಸ್ಥಾನದ ಚುರು ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭದ್ರತೆಗಾಗಿ ನಿಯೋಜಿತರಾಗಿದ್ದ 6 ಪೊಲೀಸರು ಅಪಘಾತದಲ್ಲಿ ಅಸುನೀಗಿದ್ದಾರೆ.

Advertisement

ಅವರು ಪ್ರಯಾಣಿಸುತ್ತಿದ್ದ ವಾಹನ ಪ್ರಧಾನಿಯವರ ಕಾರ್ಯಕ್ರಮ ನಡೆಯಲಿದ್ದ ಝುನ್‌ ಝುನ್‌ಗೆ ತೆರಳುತ್ತಿದ್ದ ವೇಳೆ ಟ್ರಕ್‌ ಢಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ.

ದಟ್ಟ ಮಂಜು ಆವರಿಸಿದ್ದೇ ದುರಂತಕ್ಕೆ ಕಾರಣ ಎಂದು ಪೊಲೀಸರು ಹೇಳಿದ್ದಾರೆ. ಒಬ್ಬ ಪೊಲೀಸ್‌ ಸಿಬಂದಿ ಗಾಯಗೊಂಡಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next