ಅಸುನೀಗಿದ್ದಾರೆ. ಮೂವರು ಗಾಯಗೊಂಡಿದ್ದಾರೆ. ಬುಧವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ಟಿ.ನರಸೀಪುರದಲ್ಲಿ ರಾಜ್ಯದಲ್ಲಿಯೇ ಅಧಿಕ, 14 ಸೆಂ.ಮೀ.ಗಳಷ್ಟು ಮಳೆ ಸುರಿಯಿತು.
Advertisement
ರಾಜಧಾನಿ ಬೆಂಗಳೂರು ಹಾಗೂ ಹುಬ್ಬಳ್ಳಿಯಲ್ಲಿ ಬುಧವಾರ ಮಳೆ ಆರ್ಭಟಿಸಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡವು. ಇದೇ ವೇಳೆ, ಗದಗ, ಹಾವೇರಿ, ಧಾರವಾಡ ಜಿಲ್ಲೆಗಳಲ್ಲಿ ಸಿಡಿಲಿಗೆ ಮೂವರು ಬಲಿಯಾದರು. ಸಿಡಿಲಿಗೆ ಮೂವರು ಬಲಿಯಾದರು. ಹಾವೇರಿ ಜಿಲ್ಲೆ ಹಿರೇಕೆರೂರ ತಾಲೂಕಿನ ಆಲದಗೇರಿ ಗ್ರಾಮದಲ್ಲಿ ಫಕ್ಕೀರಪ್ಪ ಸಿದ್ದಪ್ಪ ಗೋಣೇರ (25) ಎಂಬುವರು ಸಿಡಿಲಿಗೆ ಬಲಿಯಾಗಿದ್ದಾರೆ. ಬುಧವಾರ ಮಧ್ಯಾಹ್ನ ತಮ್ಮ ಜಮೀನಿನಲ್ಲಿ ಅವರೆ ಕಾಯಿ ಬಿಡಿಸುತ್ತಿದ್ದಾಗ ಸಿಡಿಲು ಬಡಿಯಿತು. ಇದೇ ವೇಳೆ, ಶರಣಪ್ಪ ಬಸಪ್ಪ ಗೊಣೇರ (38), ಮಾರುತಿ ಹನುಮಂತಪ್ಪ ಓಲೇಕಾರ (35) ಎಂಬುವರಿಗೆ ಗಾಯವಾಗಿದ್ದು, ರಾಣೆಬೆನ್ನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಧಾರವಾಡ ಸಮೀಪದ ನವಲೂರು ಗ್ರಾಮದಲ್ಲಿ ಮಲಕಪ್ಪ ಸೂರ್ಯವಂಶಿ (40) ಎಂಬುವರು ಸಿಡಿಲಿಗೆ ಬಲಿಯಾಗಿದ್ದಾರೆ. ಬುಧವಾರ ಸಂಜೆ ಹೊಲದಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿಯಿತು. ಗದಗ ಜಿಲ್ಲೆ ಲಕ್ಷ್ಮೇಶ್ವರ ಸಮೀಪದ ಹರದಗಟ್ಟಿ ಗ್ರಾಮದಲ್ಲಿ ಬುಧವಾರ ಸಂಜೆ ಸಿಡಿಲಿಗೆ ಪಾಂಡಪ್ಪ ಕೂಬಪ್ಪ ಲಮಾಣಿ (42) ಎಂಬುವರು ಮೃತಪಟ್ಟಿದ್ದಾರೆ. ಸೂರ್ಯಕಾಂತಿ ಬೆಳೆಗೆ ಗೊಬ್ಬರ ಎರಚುವಾಗ ಸಿಡಿಲು ಬಡಿಯಿತು.
Related Articles
ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಗುರುವಾರ ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕಚೇರಿ ನಿರ್ದೇಶಕ ಎಸ್.ಎಂ. ಮೆಟ್ರಿ ತಿಳಿಸಿದ್ದಾರೆ. ಲಕ್ಷದ್ವೀಪ ಸುತ್ತಮುತ್ತ ಮತ್ತು ಬಂಗಾಳ ಕೊಲ್ಲಿಯ ನೈರುತ್ಯದಿಂದ ತಮಿಳುನಾಡಿನ ಕರಾವಳಿ ನಡುವೆ ಮೇಲ್ಸೆ$¾„ ಸುಳಿಗಾಳಿ ಇರುವುದರಿಂದ ಈ ಮಳೆ ಆಗುತ್ತಿದೆ. ನಗರ ಸೇರಿದಂತೆ ಕೆಲವೆಡೆ ಭಾರಿ ಮಳೆ ಆಗುವ ಲಕ್ಷಣವೂ ಇದೆ ಎಂದು ಅವರು ತಿಳಿಸಿದ್ದಾರೆ.
Advertisement