Advertisement

ಆರು ಸಾವಿರ ಹುದ್ದೆ ಶೀಘ್ರ ನೇಮಕ: ರೇವಣ್ಣ

06:45 AM Oct 23, 2017 | Team Udayavani |

ರಾಯಚೂರು: ರಾಜ್ಯದ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಆರು ಸಾವಿರ ಹುದ್ದೆಗಳ ನೇಮಕ ಪ್ರಕ್ರಿಯೆಯನ್ನು ಶೀಘ್ರವೇ ನಡೆಸಲಾಗುವುದು ಎಂದು ಸಾರಿಗೆ ಸಚಿವ ಎಚ್‌.ಎಂ.ರೇವಣ್ಣ ತಿಳಿಸಿದರು.

Advertisement

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ನಾಲ್ಕು ನಿಗಮಗಳಿದ್ದು, ವರ್ಗಾವಣೆ ಪ್ರಕಿಯೆ ಜಟಿಲಗೊಂಡಿತ್ತು. ಈಗ ಆದ್ಯತೆ ಮೇರೆಗೆ 3,900 ನೌಕರರ ಅಂತರ್‌ ನಿಗಮ ವರ್ಗಾವಣೆ ಪ್ರಕ್ರಿಯೆ ನಡೆಸಲಾಗಿದೆ. ಶೀಘ್ರದಲ್ಲೇ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡುವ ಮೂಲಕ ಇಲಾಖೆ ಕಾರ್ಯ ಚಟುವಟಿಕೆ ಚುರುಕುಗೊಳಿಸಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next