Advertisement

ಒಡಿಶಾದಲ್ಲಿ ರಸ್ತೆ ಅಪಘಾತ: ಪಶ್ಚಿಮ ಬಂಗಾಳದ 6 ಮಂದಿ ಸಾವು

10:08 PM May 25, 2022 | Team Udayavani |

ಭುವನೇಶ್ವರ: ಪಶ್ಚಿಮ ಬಂಗಾಳ ಮೂಲದ ಪ್ರವಾಸಿಗರನ್ನು ಹೊತ್ತಿದ್ದ ಬಸ್ಸು ಮಂಗಳವಾರ ರಾತ್ರಿ ಒಡಿಶಾದ ಗಂಜಾಮ್‌ ಜಿಲ್ಲೆಯಲ್ಲಿ ಉರುಳಿ ಬಿದ್ದಿದ್ದು, ಕನಿಷ್ಠ 6 ಪ್ರವಾಸಿಗರು ಸಾವನ್ನಪ್ಪಿದ್ದಾರೆ.

Advertisement

40ಕ್ಕೂ ಅಧಿಕ ಪ್ರವಾಸಿಗರಿಗೆ ಗಾಯವಾಗಿರುವುದಾಗಿ ವರದಿಯಾಗಿದೆ. ಪಶ್ಚಿಮ ಬಂಗಾಳರ ಹೌರಾ ಮತ್ತು ಹೂಗ್ಲಿ ಜಿಲ್ಲೆಯ 65 ಮಂದಿ ಸೇರಿ ಒಟ್ಟು 77 ಪ್ರವಾಸಿಗರನ್ನು ಹೊತ್ತಿದ್ದ ಬಸ್ಸು ಒಡಿಶಾದ ದರಿಂಗಿಬಂಡಿಯಿಂದ ಆಂಧ್ರದ ವಿಶಾಖಪಟ್ಟಣಂಗೆ ತೆರಳುತ್ತಿತ್ತು.

ಗಂಜಾಮ್‌ನ ದುರ್ಗಾಪ್ರಸಾದ್‌ ಗ್ರಾಮದ ಕಾಳಿಂಗ್‌ ಘಾಟ್‌ನ ರಸ್ತೆಯಲ್ಲಿ ಬಸ್ಸು ಉರುಳಿಬಿದ್ದಿದೆ. 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 15ಕ್ಕೂ ಅಧಿಕ ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ.

ಈ ಅಪಘಾತದಲ್ಲಿ ಸಾವನ್ನಪ್ಪಿದವರಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿ ಅನೇಕ ಪ್ರಮುಖರು ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳು ಶೀಘ್ರ ಗುಣಮುಖವಾಗಲಿ ಎಂದು ಪ್ರಧಾನಿ ಹಾರೈಸಿದ್ದಾರೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next