Advertisement

‘ಕೈʼ ಟಿಕೆಟ್ ತಪ್ಪಿದ ಹಿನ್ನೆಲೆ: ಪಕ್ಷೇತರ ಅಭ್ಯರ್ಥಿಯಾಗಿ ಪತ್ನಿ ಕಣಕ್ಕೆ- SK Basavarajan

11:53 AM Apr 09, 2023 | Team Udayavani |

ಚಿತ್ರದುರ್ಗ: ಕಾಂಗ್ರೆಸ್‌ ನಿಂದ ಟಿಕೆಟ್‌ ಕೈ ತಪ್ಪಿದ ಹಿನ್ನೆಲೆಯಲ್ಲಿ ಸ್ವಪಕ್ಷದ ವಿರುದ್ದವೇ ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಬಂಡಾಯ ಎದ್ದಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಪತ್ನಿ ಸೌಭಾಗ್ಯ ಬಸವರಾಜನ್  ಕಣಕ್ಕಿಳಿಸುವುದಾಗಿ ಘೋಷಿಸಿದ್ದಾರೆ.

Advertisement

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಟಿಕೆಟ್ ಹರಾಜಾಗಿದೆ. ನಾವೇನು ಹರಾಜು ನೋಡಿಲ್ಲ, ಕೆಪಿಸಿಸಿಯಲ್ಲೇ ಹೇಳುತ್ತಾರೆ. ಚುನಾವಣೆ ಮಾಡುವಷ್ಟೇ ಹಣ ನೀಡಿದ್ದಾರೆ ಅಂತಾರೆ. ಎಷ್ಟು ಹಣವೆಂಬುದು ನಮಗೆ ಖಚಿತವಾಗಿ ಗೊತ್ತಿಲ್ಲ. ನಾವು ಆ ಹಣ ಎಣಿಸಿದವರಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: KPCC: ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷರಾಗಿ ಬಿ.ಎನ್.‌ ಚಂದ್ರಪ್ಪ ನೇಮಕ

ಮಾಜಿ ಜಿ.ಪಂ ಅಧ್ಯಕ್ಷೆಯಾಗಿದ್ದ ಪತ್ನಿ ಸೌಭಾಗ್ಯ ಅವರನ್ನು ಪಕ್ಷೇತರ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ನಿರ್ಧರಿಸಿದ್ದೇನೆ. ಎಲ್ಲಾ ವರ್ಗದ ಜನರ ಬೆಂಬಲ ಭರವಸೆಯ ನಿರೀಕ್ಷೆಯಿದೆ ಎಂದರು.

ರಘು ಆಚಾರ್ ನಿನ್ನೆ ನಮ್ಮ ಮನೆಗೆ ಬಂದಿದ್ದರು. ಜಿಲ್ಲಾ ಜೆಡಿಎಸ್ ಉಸ್ತುವಾರಿ ನೀಡುತ್ತಾರೆಂದು ಹೇಳಿಕೊಂಡರು. ಹಿರಿಯೂರು, ಹೊಸದುರ್ಗದಿಂದ ಸ್ಪರ್ಧಿಸುವಂತೆ ಸಲಹೆ ನೀಡಿದರು. ಚುನವಣೆಗೆ ಹಣ ನೀಡುವುದಾಗಿಯೂ ಹೇಳಿದರು. ಆದರೆ ನಾವು ಚಿತ್ರದುರ್ಗದಿಂದಲೇ ಪಕ್ಷೇತರವಾಗಿ ಸ್ಪರ್ಧೆಗೆ ನಿರ್ಧರಿಸಿದ್ದೇವೆ ಎಂದರು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next