Advertisement

ಎಸ್‌.ಕೆ.ಬೆಳ್ಳುಬ್ಬಿ ಮರಳಿ ಬಿಜೆಪಿಗೆ

12:14 PM Mar 25, 2019 | Team Udayavani |

ಬೆಂಗಳೂರು: ಕಳೆದ ರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪಕ್ಷ ತೊರೆದಿದ್ದ ಮಾಜಿ ಸಚಿವ ಎಸ್‌.ಕೆ.ಬೆಳ್ಳುಬ್ಬಿಯವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಮರಳಿ ಬಿಜೆಪಿ ಸೇರಿದರು.

Advertisement

ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಎಸ್‌.ಕೆ.ಬೆಳ್ಳುಬ್ಬಿ ಅವರು ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಟಿಕೆಟ್‌ ವಂಚಿತರಾಗಿದ್ದರಿಂದ ಪಕ್ಷ ತೊರೆದು ಜೆಡಿಎಸ್‌ ಸೇರಿದ್ದರು. ಈಗ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಬೆಂಬಲಿಗರ ಜತೆ ಬಿಜೆಪಿಗೆ ಸೇರಿದರು.

ನಂತರ ಮಾತನಾಡಿದ ಬಿ.ಎಸ್‌.ಯಡಿಯೂರಪ್ಪ, ಯಾವುದೋ ಕಾರಣಕ್ಕೆ ಟಿಕೆಟ್‌ ವಂಚಿತರಾಗಿದ್ದ ಅವರು ಪಕ್ಷ ಬಿಟ್ಟು ಹೋಗಿದ್ದರು. ಈಗ ಬೆಂಬಲಿಗರೊಂದಿಗೆ ವಾಪಸ್‌ ಬಂದಿದ್ದಾರೆ. ಇದರಿಂದ ಆ ಭಾಗದಲ್ಲಿ ಬಿಜೆಪಿ ಶಕ್ತಿ ಇನ್ನಷ್ಟು ಹೆಚ್ಚಲಿದೆ ಎಂದು ಹೇಳಿದರು. ಈ ವೇಳೆ ಮಾಜಿ ಸಚಿವ ಮುರುಗೇಶ್‌ ನಿರಾಣಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next