Advertisement

ಕನ್ನಡ ನಟನ ಹತ್ಯೆಗೆ ಸ್ಕೆಚ್: ನಾಲ್ವರು ಅರೆಸ್ಟ್

08:25 AM Mar 09, 2019 | |

ಬೆಂಗಳೂರು: ಕನ್ನಡ ಚಿತ್ರರಂಗದ ಜನಪ್ರಿಯ ನಟನನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ನಾಲ್ವರನ್ನು ಸಿಸಿಬಿ ಪೊಲೀಸರು ಪೊಲೀಸರು ಬಂಧಿಸಿದ್ದಾರೆ.

Advertisement

ವಿಜಯನಗರದ ಮಧು, ಶೇಷಾದ್ರಿಪುರಂನ ನಿತೇಶ್, ನಿತ್ಯಾನಂದ ಹಾಗೂ ಪಿಜಿಹಳ್ಳಿಯ ಪೃಥ್ವಿ ಬಂಧಿತ ಆರೋಪಿಗಳು. ಇವರೆಲ್ಲರೂ ಸ್ಲಂ ಭರತನ ಸಹಚರರು ಎಂದು ಗುರುತಿಸಲಾಗಿದೆ. 

ಕಳೆದ ಮಾರ್ಚ್ ಏಳರಂದು ಎಸಿಪಿ ಬಾಲರಾಜ್ ನೇತೃತ್ವದಲ್ಲಿ ಸಿಸಿಬಿ ಪೊಲೀಸರು ಈ ಆರೋಪಿಗಳನ್ನು ಬಂಧಿಸಿದ್ದರು. ಬಂಧಿತರ ಬಳಿ ಲಾಂಗು, ಡ್ರಾಗರ್ ಮುಂತಾದ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಯಾವ ನಟನ ಹತ್ಯೆಗೆ ಇವರು ಸಂಚು ರೂಪಿಸಿದ್ದರು ಎಂದು ಇನ್ನೂ ತಿಳಿದು ಬಂದಿಲ್ಲ . 

Advertisement

Udayavani is now on Telegram. Click here to join our channel and stay updated with the latest news.

Next