Advertisement

ಜಮ್ಮು-ಕಾಶ್ಮೀರದ ಗುಲ್ಮಾರ್ಗ್‌ನಲ್ಲಿ ಹಿಮಪಾತ… ಓರ್ವ ವಿದೇಶಿಗ ಮೃತ್ಯು, ಇನ್ನೋರ್ವ ನಾಪತ್ತೆ

03:37 PM Feb 22, 2024 | Team Udayavani |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗುಲ್ಮಾರ್ಗ್‌ನಲ್ಲಿ ಸಂಭವಿಸಿದ ಹಿಮಪಾತದಲ್ಲಿ ಓರ್ವ ಮೃತಪಟ್ಟು ಕೆಲವರು ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.

Advertisement

ಮಾಹಿತಿಯ ಪ್ರಕಾರ, ಹಿಮಪಾತ ಸಂಭವಿಸಿದ ವೇಳೆ ವಿದೇಶಿಗರು ಸೇರಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸ್ಕೀಯಿಂಗ್ ಮಾಡುತ್ತಿದ್ದರು ಎನ್ನಲಾಗಿದೆ ಈ ವೇಳೆ ಹಠಾತ್ ಹಿಮಪಾತ ಸಂಭವಿಸಿದೆ ಪರಿಣಾಮ ಅಲ್ಲಿದ್ದ ಕೆಲವರು ಓಡಿ ಪ್ರಾಣ ಉಳಿಸಿಕೊಂಡರೆ ಮೂವರು ವಿದೇಶಿಗರು ಹಿಮಪಾತದಲ್ಲಿ ಸಿಲುಕಿದ್ದಾರೆ ಎನ್ನಲಾಗಿದೆ ಕೂಡಲೇ ರಕ್ಷಣಾ ಕಾರ್ಯಾಚರಣೆ ನಡೆಸಿದ ತಂಡ ಓರ್ವ ವಿದೇಶಿಗನನ್ನು ರಕ್ಷಣೆ ಮಾಡಿದ್ದು ಆತನನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಇನ್ನೋರ್ವ ವಿದೇಶಿಗ ಮೃತಪಟ್ಟಿರುವುದಾಗಿ ವರದಿಯಾಗಿದ್ದು ನಾಪತ್ತೆಯಾದ ಓರ್ವನಿಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಮಧ್ಯಾಹ್ನ 2 ಗಂಟೆ ಸುಮಾರಿಗೆ ಗುಲ್ಮಾರ್ಗ್‌ನ ಬ್ಯಾಕ್ ಕಂಟ್ರಿ ಪ್ರದೇಶದಲ್ಲಿ ಈ ಹಿಮಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ,

ಶ್ರೀನಗರ ರಾಷ್ಟ್ರೀಯ ಹೆದ್ದಾರಿ ನಾಲ್ಕನೇ ದಿನವೂ ಬಂದ್ ಆಗಿದ್ದು, ರಾಂಬನ್ – ಬನಿಹಾಲ್ ಸೆಕ್ಟರ್‌ನ ಹಲವೆಡೆ ಗುಡ್ಡದಳ್ಳಿ ಕಂಡು ಬಂದ ಬಿರುಕಿನಿಂದ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇಲ್ಲಿನ ಆಡಳಿತದಿಂದ ಸಂಚಾರ ಪುನಶ್ಚೇತನ ಕಾರ್ಯ ನಡೆಯುತ್ತಿದೆ.

ಇದನ್ನೂ ಓದಿ: Jaahnavi Kandula: ಭಾರತೀಯ ವಿದ್ಯಾರ್ಥಿನಿಯನ್ನು ಕೊಂದ ಪೊಲೀಸ್ ಅಧಿಕಾರಿ ಶಿಕ್ಷೆಯಿಂದ ಪಾರು

Advertisement
Advertisement

Udayavani is now on Telegram. Click here to join our channel and stay updated with the latest news.

Next