Advertisement

ಜಮೀನಿನಲ್ಲಿ ಮೇಕೆ ಮೇಯಿಸಬೇಡಿ ಅಂದಿದ್ದಕ್ಕೆ ಮಾಲೀಕನ ಬರ್ಬರ ಹತ್ಯೆ!

09:41 AM Jun 29, 2019 | Team Udayavani |

ಬೆಳಗಾವಿ: ಜಮೀನಿನಲ್ಲಿ ಮೇಕೆಗಳನ್ನು ಮೇಯಿಸಬೇಡಿ ಎಂದು ಹೇಳಿದ್ದಕ್ಕೆ ಜಮೀನಿನ ಮಾಲೀಕನನ್ನೇ ಬರ್ಬರವಾಗಿ ಹತ್ಯೆಗೈದ ಘಟನೆ ಇಲ್ಲಿನ ಮುತ್ಯಾನಟ್ಟಿ ಗ್ರಾಮದಲ್ಲಿ ನಡೆದಿದೆ.

Advertisement

ನಿನ್ನೆ ಬೆಳಗ್ಗೆ ಜಮೀನಿನಲ್ಲಿ ಹೇಳದೆ ಕೇಳದೆ ಕುರಿ ಮೇಯಿಸುತ್ತಿದ್ದನ್ನು ಗಮನಿಸಿದ ಮಾಲೀಕ ಸಿದ್ರಾಯಿ, ಕುರಿ ಮೇಯಿಸದಂತೆ ಎಚ್ಚರಿಕೆ ನೀಡಿದ್ದರು. ಇದಕ್ಕೆ ಆಕ್ರೋಶಗೊಂಡ ಆರು ಮಂದಿ ಮನೆ ಮುಂದೆ ನಿಂತಿದ್ದ ಸಿದ್ರಾಯಿ ನಾಯಿಕ(30)ನನ್ನು ಬರ್ಬರವಾಗಿ ಹತ್ಯೆಗೈದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಆರು ಮಂದಿ ಮಾರಕಾಸ್ತ್ರಗಳಿಂದ ಸಿದ್ರಾಯಿಯ ಕುತ್ತಿಗೆ ಹಿಂಭಾಗ ಕೊಚ್ಚಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಪ್ರಕರಣ ಕಾಕತಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು,ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next