Advertisement

Lok Sabha Elections; ಎಸ್‌.ಎಂ.ಕೃಷ್ಣ ಆಶೀರ್ವಾದ ಪಡೆದ ಕುಮಾರಸ್ವಾಮಿ

11:05 PM Apr 08, 2024 | Team Udayavani |

ಬೆಂಗಳೂರು: ಮಂಡ್ಯ ಎನ್‌ಡಿಎ ಅಭ್ಯರ್ಥಿ ಎಚ್‌.ಡಿ. ಕುಮಾರಸ್ವಾಮಿ ಅವರು ಸೋಮವಾರ ಬೆಂಗಳೂರಿನಲ್ಲಿ ಮಾಜಿ ಸಿಎಂ ಎಸ್‌.ಎಂ. ಕೃಷ್ಣ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

Advertisement

ಬೆಂಗಳೂರಿನ ಎಸ್‌.ಎಂ. ಕೃಷ್ಣ ನಿವಾಸಕ್ಕೆ ಆಗಮಿಸಿದ ಕುಮಾರಸ್ವಾಮಿ ಅವರು ಕೃಷ್ಣರಿಗೆ ಶಾಲು ಹೊದೆಸಿ, ಹೂಗುತ್ಛ ನೀಡಿ ಮಾಲಾರ್ಪಣೆ ಮಾಡಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡರು. ಉಭಯ ಕುಶಲೋಪರಿ ವಿಚಾರಿಸಿದ ನಾಯಕರು, ರಾಜ್ಯ ರಾಜಕಾರಣದ ಕುರಿತು ಸ್ವಲ್ಪ ಹೊತ್ತು ಚರ್ಚಿಸಿದರು.

ಮಂಡ್ಯದ ರಾಜಕೀಯ ಸನ್ನಿವೇಶದ ಕುರಿತೂ ಚರ್ಚಿಸಿದರು.

ವಿಪಕ್ಷ ನಾಯಕ ಆರ್‌.ಅಶೋಕ್‌, ಮಾಜಿ ಡಿಸಿಎಂ ಡಾ| ಸಿ.ಎನ್‌.ಅಶ್ವತ್ಥನಾರಾಯಣ, ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖೀಲ್‌ ಕುಮಾರಸ್ವಾಮಿ, ಸಿ.ಎಸ್‌. ಪುಟ್ಟರಾಜು, ಡಾ| ಆಂಜಿನಪ್ಪ ಜತೆಗಿದ್ದರು. ಇತ್ತೀಚೆಗಷ್ಟೇ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ಕೂಡ ಸಚಿವ ಚಲುವರಾಸ್ವಾಮಿ ಜತೆಗೆ ಎಸ್‌.ಎಂ. ಕೃಷ್ಣರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next