Advertisement

ಎಸ್‌.ಎಂ. ಕೃಷ್ಣ ಛಾಪು ಇರಲಿ: ಸಿಎಂ ಬಸವರಾಜ ಬೊಮ್ಮಾಯಿ

03:29 PM Aug 10, 2021 | Team Udayavani |

ಬೆಂಗಳೂರು: ಮಾಜಿ ಸಿಎಂ ಎಸ್‌.ಎಂ. ಕೃಷ್ಣ ಅವರ ಆಡಳಿತದ ಛಾಪು ನನ್ನ ಆಡಳಿತದಲ್ಲಿ ಇರಲಿದೆ ಎಂದು ಸಿಎಂ ಬಸವರಾಜ
ಬೊಮ್ಮಾಯಿ ಹೇಳಿದ್ದಾರೆ.

Advertisement

ಎಸ್‌.ಎಂ. ಕೃಷ್ಣ ಅವರನ್ನು  ಭೇಟಿ ಮಾಡಿ ಮಾತುಕತೆ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ಎಸ್‌.ಎಂ. ಕೃಷ್ಣ ಹಾಗೂ ನಮ್ಮ ತಂದೆ ಅತ್ಯಂತ ಆತ್ಮೀಯರು, ಅವರ ಆಶೀರ್ವಾದ ಪಡೆದುಕೊಂಡಿದ್ದೇನೆ. ಅವರ ಅವಧಿಯಲ್ಲಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅವುಗಳನ್ನು ಮುಂದುವರಿಸುವ ಬಗ್ಗೆ ಚರ್ಚೆ ನಡೆಸಿದ್ದೇನೆ ಎಂದರು.

ಈ ಸಂದರ್ಭದಲ್ಲಿ ಮಾತನಾಡಿದ ಎಸ್‌.ಎಂ. ಕೃಷ್ಣ, ಬಸವರಾಜ ಬೊಮ್ಮಾಯಿ ಅವರು ನಾನು ಮುಖ್ಯಮಂತ್ರಿಯಾಗಿದ್ದಾಗ ವಿಧಾನಪರಿಷತ್‌ ಸದಸ್ಯರಾಗಿದ್ದರು. ಆಗ ನನಗೆ ಬಹಳ ತೊಂದರೆ ಕೊಡುತ್ತಿದ್ದರು. ಆದರೆ, ಎಲ್ಲವೂ ಸಕಾರಾತ್ಮಕವಾಗಿತ್ತು.

ಇದನ್ನೂ ಓದಿ:ಫೈಟರ್ ಸಾವು : ಒಂದು ದಿನ ತಡವಾಗಿ ಟ್ವೀಟ್ ಮಾಡಿದ ಚಿತ್ರದ ನಾಯಕಿ ರಚಿತಾ ರಾಮ್

ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಇಬ್ಬರೂ ಚರ್ಚೆ ನಡೆಸಿದ್ದೇವೆ. ಅವರು ಉತ್ತಮ ರೀತಿಯಲ್ಲಿ ಈ ನಾಡನ್ನು ಮುನ್ನಡೆಸುತ್ತಾರೆಂಬ ವಿಶ್ವಾಸ ನನಗಿದೆ. ಅವರಿಗೆ ನಮ್ಮೆಲ್ಲರ ಬೆಂಬಲ ಇದೆ ಎಂದು ಹೇಳಿದರು

Advertisement

 

Advertisement

Udayavani is now on Telegram. Click here to join our channel and stay updated with the latest news.

Next