Advertisement

ಕೋವಿಂದ್‌ ಬೆಂಬಲಿಸಲು ಎಸ್‌.ಎಂ.ಕೃಷ್ಣ ಪತ್ರ

04:00 AM Jul 09, 2017 | Team Udayavani |

ಬೆಂಗಳೂರು: ಈ ತಿಂಗಳು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ
ರಾಮ್‌ನಾಥ್‌ ಕೋವಿಂದ್‌ ಅವರನ್ನು ಬೆಂಬಲಿಸುವಂತೆ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರು ಎಲ್ಲಾ ರಾಜ್ಯಗಳ ಸಂಸದರು ಮತ್ತು ಶಾಸಕರಿಗೆ ಪತ್ರ ಬರೆದಿದ್ದಾರೆ. ಪ್ರಸ್ತುತ ಭಾರತವು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ರಾಜಕೀಯವಾಗಿ ಬಲಿಷ್ಠಗೊಂಡಿದೆ. ಇದರ ಪರಿಣಾಮ ಆರ್ಥಿಕ ಕ್ಷೇತ್ರದಲ್ಲೂ ದಾಪುಗಾಲಿಟ್ಟು ಮುನ್ನಡೆಯುತ್ತಿದೆ.

Advertisement

ಇದರ ಜತೆಗೆ ದೇಶವು ಸಾಮಾಜಿಕವಾಗಿ ಸರ್ವರ ಹಿತ ರಕ್ಷಿಸುತ್ತಾ ಮುನ್ನಡೆಯುತ್ತಿದೆ ಎಂಬುದಕ್ಕೆ ರಾಷ್ಟ್ರಪತಿ
ಅಭ್ಯರ್ಥಿಯಾಗಿ ಎನ್‌ಡಿಎ ಮೈತ್ರಿಕೂಟ ರಾಮ್‌ನಾಥ್‌ ಕೋವಿಂದ್‌ ಅವರನ್ನು ಆಯ್ಕೆ ಮಾಡಿರುವುದೇ ಸಾಕ್ಷಿ.
ಆದ್ದರಿಂದ ಜುಲೈ 17ರಂದು ನಡೆಯುವ ರಾಷ್ಟ್ರಪತಿ ಚುನಾವಣೆಯಲ್ಲಿ ರಾಮ್‌ನಾಥ್‌ ಕೋವಿಂದ್‌ ಅವರನ್ನು
ಬೆಂಬಲಿಸಬೇಕು ಎಂದು ಎಲ್ಲಾ ರಾಜ್ಯಗಳ ಸಂಸದರು ಮತ್ತು ಶಾಸಕರಲ್ಲಿ ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next