Advertisement
ನಗರದ ಶೇಷಾದ್ರಿ ಅಯ್ಯರ್ ರಸ್ತೆಯಲ್ಲಿರುವ ಪಾಲಿಕೆ ವಲಯ ಕಚೇರಿ 6 ರಲ್ಲಿ ಶನಿವಾರ ಆಯೋಜಿಸಿದ್ದ ಪ್ರಧಾನ ಮಂತ್ರಿ ಆತ್ಮನಿರ್ಭರನಿಧಿ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳಿಗೆ ನೀಡುವ ಕಿರು ಸಾಲಸೌಲಭ್ಯ ಮೇಳದಲ್ಲಿ ಸಾಂಕೇತಿಕವಾಗಿ 10 ಮಂದಿಗೆ ಸಾಲಸೌಲಭ್ಯ ಪತ್ರ ನೀಡಿದರು. ಬಳಿಕ ಮಾತನಾಡಿದ ಅವರು, ಕೋವಿಡ್ ಸಂದರ್ಭದಲ್ಲಿ ನಷ್ಟದಲ್ಲಿರುವ ಬೀದಿಬದಿ ವ್ಯಾಪಾರಿಗಳಿಗೆ ಆರ್ಥಿಕವಾಗಿ ಸಹಾಯ ಮಾಡುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿಯವರು ಈ ಕಿರುಸಾಲ ಯೋಜನೆ ಜಾರಿಗೊಳಿಸಿದ್ದಾರೆ. ಇದರಲ್ಲಿ 10 ಸಾವಿರ ರೂ. ವರೆಗೆ ಭದ್ರತೆ ರಹಿತ ಸಾಲಸೌಲಭ್ಯ ಸಿಗಲಿದೆ. ಈ ಯೋಜನೆ ಜುಲೈ 1ರಿಂದ ಆರಂಭವಾಗಿದ್ದು 2022ರ ಮಾರ್ಚ್ 31 ರವರೆಗೂ ಅನುಷ್ಠಾನದಲ್ಲಿರಲಿದೆ.ನಗರದ ಎಲ್ಲಾ ಬೀದಿಬದಿ ವ್ಯಾಪಾರಿಗಳು ಈ ಸಾಲ ಸೌಲಭ್ಯ ಪಡೆದುಕೊಳ್ಳಿ ಎಂದು ಮನವಿ ಮಾಡಿದರು.
Advertisement
ಕಿರು ಸಾಲ ಸೌಲಭ್ಯ ಮೇಳಕ್ಕೆ ಶಾಸಕ ಚಾಲನೆ
04:29 PM Nov 29, 2020 | Suhan S |
Advertisement
Udayavani is now on Telegram. Click here to join our channel and stay updated with the latest news.