Advertisement

“ಸ್ಮಾರ್ಟ್‌ಕಾರ್ಡ್‌ ಗೊಂದಲ ಸರಿಪಡಿಸಲಾಗುವುದು’

12:09 AM Mar 08, 2022 | Team Udayavani |

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಲಿಗೆ ವೃತ್ತಿಯಲ್ಲಿ ತೊಡಗಿಸಿಕೊಂಡ ಕಾರ್ಮಿಕರ ಸ್ಮಾರ್ಟ್‌ಕಾರ್ಡ್‌ ವಿತರಣೆಯಲ್ಲಿ ಆಗಿರುವ ಸಮಸ್ಯೆಗಳನ್ನು ಸರಿಪಡಿಸಲಾಗು ವುದು ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಟಾರ್‌ ಭರವಸೆ ನೀಡಿದ್ದಾರೆ.

Advertisement

ಕಾಂಗ್ರೆಸ್‌ ಸದಸ್ಯ ಹರೀಶ್‌ ಕುಮಾರ್‌ ವಿಷಯ ಪ್ರಸ್ತಾವಿಸಿ, ಸ್ಮಾರ್ಟ್‌ಕಾರ್ಡ್‌ಗಾಗಿ ಜಿಲ್ಲೆಯಲ್ಲಿ 5 ಸಾವಿರ ಟೈಲರ್‌ಗಳು ಅರ್ಜಿ ಸಲ್ಲಿಸಿದ್ದಾರೆ. ಆ ಪೈಕಿ 3 ಸಾವಿರ ಮಂದಿಗೆ ಸ್ಮಾರ್ಟ್‌ಕಾರ್ಡ್‌ ನೀಡಲಾಗಿದೆ. ಆದರೆ, ಅರ್ಜಿಯಲ್ಲಿ ಹೊಲಿಗೆ ವೃತ್ತಿ ಎಂದು ನಮೂದಿಸಿದ್ದರೂ ಸ್ಮಾರ್ಟ್‌ಕಾರ್ಡ್‌ ವೃತ್ತಿ ಬದಲಾಗಿದೆ. ಜೊತೆಗೆ, ಹೆಸರು, ಆಧಾರ್‌ ಸಂಖ್ಯೆ, ಮೊಬೈಲ್‌ ಸಂಖ್ಯೆ ಬೇರೆ ಬೇರೆ ಆಗಿದೆ. ಇದರಿಂದ ಸ್ಮಾರ್ಟ್‌ ಕಾರ್ಡ್‌ ಇದ್ದರೂ ಸೌಲಭ್ಯಗಳು ಸಿಗುತ್ತಿಲ್ಲ.

ಸಮಸ್ಯೆ ಸರಿಪಡಿಸುವಂತೆ ಅಧಿಕಾರಿಗಳಿಗೆ ಕೇಳಿದರೆ, ತಿದ್ದುಪಡಿ ಮಾಡುವ ಅಧಿಕಾರ ನಮಗಿಲ್ಲ ಎಂದು ಹೇಳುತ್ತಾರೆ. ಕಳೆದ 3 ವರ್ಷಗಳಿಂದ ಈ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಹರೀಶ್‌ ಕುಮಾರ್‌ ಸಚಿವರ ಗಮನಕ್ಕೆ ತಂದರು. ಇದಕ್ಕೆ ಉತ್ತರಿಸಿದ ಸಚಿವರು, ಸಮಸ್ಯೆ ಸರಿಪಡಿಸಲಾಗುವುದು ಎಂದು ಭರವಸೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next