Advertisement

ಮಹಾಲಕ್ಷ್ಮೀ ಲೇಔಟ್‌ ಕ್ಷೇತ್ರಕ್ಕೆ ಎಸ್‌ಎಂಕೆ ಮೊಮ್ಮಗ ಬಿಜೆಪಿ ಟಿಕೆಟ್‌ ಆಕಾಂಕ್ಷಿ

11:14 PM Aug 28, 2019 | Lakshmi GovindaRaj |

ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅನರ್ಹರಾಗಿರುವ ಗೋಪಾಲಯ್ಯ ಅವರಿಂದ ತೆರವಾಗಿರುವ ಮಹಾಲಕ್ಷ್ಮೀ ಲೇಔಟ್‌ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರ ಮೊಮ್ಮಗ ನಿರಂತರ ಗಣೇಶ್‌ ಬಿಜೆಪಿಯ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ.

Advertisement

ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರ ತಂಗಿಯ ಮೊಮ್ಮಗ ಡಾ.ನಿರಂತರ ಗಣೇಶ್‌ ಅವರು ಕಾಂಗ್ರೆಸ್‌ ವೈದ್ಯಕೀಯ ಘಟಕದ ಅಧ್ಯಕ್ಷರಾಗಿದ್ದರು. ಈಗ ಕೆಪಿಸಿಸಿ ವೈದ್ಯಕೀಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ಮಹಾಲಕ್ಷ್ಮೀ ಲೇಔಟ್‌ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವಥ್‌ ನಾರಾಯಣ, ಕಂದಾಯ ಸಚಿವ ಆರ್‌.ಅಶೋಕ್‌, ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ರಾಜಕಾರಣ ರಕ್ತಗತವಾಗಿ ಬಂದಿದೆ. ತಾತ, ಮುತ್ತಾತ ರಾಜಕಾರಣದಲ್ಲಿ ದ್ದರು. ವೈದ್ಯನಾಗಿ ಸಾಕಷ್ಟು ಉಚಿತ ಸೇವೆ ಮಾಡುತ್ತಿದ್ದೇನೆ. ಜನರ ಸಮಸ್ಯೆಗೆ ಸ್ಪಂದಿಸಲು ಇನ್ನಷ್ಟು ಕೆಲಸ ಮಾಡಬೇಕಿದೆ. ಹೀಗಾಗಿ, ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ದತೆ ಮಾಡಿಕೊಳ್ಳುತ್ತಿದ್ದೇನೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next