Advertisement

ಬೇಡವಾಯ್ತೆ ಬಿಜೆಪಿ !;ಎಸ್‌.ಎಂ.ಕೃಷ್ಣ ಮರಳಿ ಕೈ ಹಿಡಿಯುವತ್ತ? 

10:18 AM Apr 10, 2018 | |

ಬೆಂಗಳೂರು: ಬಿಜೆಪಿ ಸೇರ್ಪಡೆಯಾಗಿದ್ದ ಹಿರಿಯ ರಾಜಕಾರಣಿ ಎಸ್‌.ಎಂ.ಕೃಷ್ಣ ಅವರು ಮರಳಿ ಕಾಂಗ್ರೆಸ್‌ ಸೇರ್ಪಡೆಯಾಗುತ್ತಿದ್ದಾರೆ ಎನ್ನಲಾಗಿದೆ. 

Advertisement

ಬಿಜೆಪಿ ತನ್ನನ್ನು ನಡೆಸಿಕೊಂಡಿರುವುದು ಸೇರಿದಂತೆ, ಹಲವು ವಿಚಾರಗಳಲ್ಲಿ ಅಸಮಾಧಾನ ಹೊಂದಿರುವ ಎಸ್‌.ಎಂ.ಕೃಷ್ಣ ಅವರನ್ನು ಪಕ್ಷಕ್ಕೆ ಮರಳಿ ಕರೆ ತಂದು ಚುನಾವಣಾ ಪ್ರಚಾರದಲ್ಲಿ ಬಳಸಿಕೊಳ್ಳಲು ಕಾಂಗ್ರೆಸ್‌ ಪಕ್ಷದಲ್ಲಿ ವೇದಿಕೆ ಸಿದ್ದಗೊಂಡಿರುವುದು ಬಹಿರಂಗವಾಗಿದೆ. 

ಈ ಕುರಿತಾಗಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ಮತ್ತು ಸಚಿವ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಮಾತುಕತೆಯೂ ನಡೆದಿದ್ದು , ಕೃಷ್ಣ ಅವರನ್ನು ಪಕ್ಷಕ್ಕೆ ಮರಳಿ ಕರೆತರಲು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಮತ್ತು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ  ಕೆ.ಸಿ.ವೇಣುಗೋಪಾಲ್‌ ಅವರ ಅನುಮತಿಯೂ ಪಡೆಯಲಾಗಿದೆ ಎಂದು ವರದಿಯಾಗಿದೆ.  

ಆದರೆ ಈ ಕುರಿತು ಎಸ್‌.ಎಂ.ಕೃಷ್ಣ ಅವರು ಯಾವುದೇ ಪ್ರತಿಕ್ರಿಯೆ ನೀಡದೆ ಮೌನಕ್ಕೆ ಶರಣಾಗಿದ್ದಾರೆ.

ಪುತ್ರಿ ಶಾಂಭವಿಗೆ ಬಿಜೆಪಿ ಟಿಕೆಟ್‌ ಸಿಗದೇ ಇರುವುದು, ಅಳಿಯನ ಮೇಲಾಗಿರುವ ಐಟಿ ದಾಳಿ ಸೇರಿದಂತೆ ಹಲವು ವಿಚಾರಗಳಲ್ಲಿ ಮಾಜಿ ವಿದೇಶಾಂಗ ಸಚಿವ, ಮಾಜಿ ಮುಖ್ಯಮಂತ್ರಿಯೂ ಆಗಿರುವ ಎಸ್‌.ಎಂ.ಕೃಷ್ಣ ಅವರಿಗಿರುವ ಅಸಮಾಧಾನ ಎಲ್ಲರಿಗೂ ತಿಳಿದಿರುವ ಸತ್ಯ. 

Advertisement
Advertisement

Udayavani is now on Telegram. Click here to join our channel and stay updated with the latest news.

Next