Advertisement

ಅಮೇಥಿಯಲ್ಲಿ ಸ್ಮೃತಿ ಇರಾನಿ ಆಪ್ತನ ಬರ್ಬರ ಹತ್ಯೆ

09:24 AM May 27, 2019 | Vishnu Das |

ಅಮೇಥಿ : ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಆಪ್ತ ಸುರೇಂದ್ರ ಸಿಂಗ್‌ ಅವರನ್ನು ಭಾನುವಾರ ಬೆಳಗ್ಗೆ ಗುಂಡಿಕ್ಕಿ ಬರ್ಬರವಾಗಿ ಹತ್ಯೆಗೈಯಲಾಗಿದೆ.

Advertisement

ಸ್ಮೃತಿ ಇರಾನಿ ಅವರ ಗೆಲುವಿನ ಸಂಭ್ರಮಾಚರಣೆಗೆ ತೆರಳಿ ಮನೆಗೆ ವಾಪಾಸಾಗಿ ಮನೆಯ ಹೊರಗೆ ಮಲಗಿದ್ದ ವೇಳೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿದ್ದಾರೆ.

ಲಕ್ನೋದ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಸುರೇಂದ್ರ ಸಿಂಗ್‌ ಕೊನೆಯುಸಿರೆಳೆದಿದ್ದಾರೆ.

ಘಟನೆಬಳಿಕ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಇಬ್ಬರು ಶಂಕಿತ ಆರೋಪಿಗಳನ್ನುವಶಕ್ಕೆ ಪಡೆದು ಉನ್ನತ ಮಟ್ಟದ ತನಿಖೆ ಅರಂಭಿಸಿದ್ದಾರೆ.

ಸುರೇಂದ್ರ ಸಿಂಗ್‌ ಅವರು ಸ್ಮೃತಿ ಇರಾನಿ ಅವರಆಪ್ತರಾಗಿ ಗುರುತಿಸಿಕೊಂಡಿದ್ದು ತಳಮಟ್ಟದಲ್ಲಿ ಭಾರೀ ಶ್ರಮ ವಹಿಸಿದ್ದರು ಎಂದು ಹೇಳಲಾಗಿದೆ.

Advertisement

ಇದುವರೆಗೆ ಅಮೇಥಿಯಲ್ಲಿ ಶಾಂತಿಯುತ ವಾತಾವರಣವಿದ್ದು,ಯಾವ ಕಾರಣಕ್ಕಾಗಿ ಕೊಲೆ ನಡೆದಿದೆ ಎನ್ನುವುದು ಇನ್ನಷ್ಟೇ ತಿಳಿದು ಬರಬೇಕಿದೆ.

ಅಮೇಥಿ ಕ್ಷೇತ್ರದಲ್ಲಿ ಇರಾನಿ ಅವರು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ವಿರುದ್ಧ ಭರ್ಜರಿ ಜಯ ಗಳಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next