Advertisement

ಸ್ಮೃತಿ ಮಗಳಿಗೆ ಸಂಬಂಧಿಸಿದ ಟ್ವೀಟ್, ವಿಡಿಯೋ ಡಿಲೀಟ್ ಮಾಡಿ: ಕಾಂಗ್ರೆಸ್ ಮುಖಂಡರಿಗೆ ಕೋರ್ಟ್

04:28 PM Jul 29, 2022 | Team Udayavani |

ನವದೆಹಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೂಡಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಶುಕ್ರವಾರ (ಜುಲೈ29) ಕಾಂಗ್ರೆಸ್ ಮುಖಂಡರಾದ ಜೈರಾಮ್ ರಮೇಶ್, ಪವನ್ ಖೇರಾ ಮತ್ತು ನೆಟ್ಟಾ ಡಿ’ಸೋಜಾ ಸೇರಿದಂತೆ ಮೂವರಿಗೆ ಸಮನ್ಸ್ ಜಾರಿ ಮಾಡಿದೆ.

Advertisement

ಇದನ್ನೂ ಓದಿ:ಯುಪಿ ಮಾದರಿ ಅನುಕರಣೆ ಎನ್ನುವುದು ಹೊಣೆಗೇಡಿತನದ ಪರಮಾವಧಿ: ಕುಮಾರಸ್ವಾಮಿ ಟೀಕೆ

ಸ್ಮೃತಿ ಇರಾನಿ ಮತ್ತು ಅವರ ಮಗಳಿಗೆ ಸಂಬಂಧಿಸಿದ ಪೋಟೋ, ವಿಡಿಯೋ, ಟ್ವೀಟ್, ರೀ ಟ್ವೀಟ್ಸ್ ಅನ್ನು ಸಾಮಾಜಿಕ ಜಾಲತಾಣಗಳಿಂದ ತೆಗೆದುಹಾಕುವಂತೆ ಹೈಕೋರ್ಟ್ ಸೂಚನೆ ನೀಡಿದೆ.

ಸ್ಮೃತಿ ಇರಾನಿ ಮಗಳು ಗೋವಾದಲ್ಲಿ ಕಾನೂನು ಬಾಹಿರವಾಗಿ ಬಾರ್ ಅನ್ನು ನಡೆಸುತ್ತಿರುವುದಾಗಿ ಆರೋಪಿಸಿ ಟ್ವೀಟ್, ಫೋಟೋ, ವಿಡಿಯೋಗಳನ್ನು ಹಂಚಿಕೊಂಡಿದ್ದರು. ಕಾಂಗ್ರೆಸ್ ಮುಖಂಡರು 24ಗಂಟೆಯೊಳಗೆ ಟ್ವೀಟ್, ವಿಡಿಯೋಗಳನ್ನು ಡಿಲೀಟ್ ಮಾಡುವಂತೆ ಹೈಕೋರ್ಟ್ ತಿಳಿಸಿದೆ.

ತನ್ನ ಹಾಗೂ ಮಗಳ ವಿರುದ್ಧ ಆಧಾರ ರಹಿತ ಆರೋಪ ಮಾಡಿರುವುದಾಗಿ ದೂರಿದ್ದು, ಈ ಹಿನ್ನೆಲೆಯಲ್ಲಿ ಮೂವರು ಕಾಂಗ್ರೆಸ್ ಮುಖಂಡರ ವಿರುದ್ಧ ಸ್ಮೃತಿ ಇರಾನಿ 2 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈರಾಮ್ ರಮೇಶ್, ಖೇರಾ ಮತ್ತು ನೆಟ್ಟಾ ಡಿಸೋಜಾ ಆಗಸ್ಟ್ 18ರಂದು ಕೋರ್ಟ್ ಗೆ ಹಾಜರಾಗುವಂತೆ ಆದೇಶ ನೀಡಿದೆ.

Advertisement

ಒಂದು ವೇಳೆ ಕಾಂಗ್ರೆಸ್ ಮುಖಂಡರು ಟ್ವೀಟ್ಸ್ ಗಳನ್ನು ತೆಗೆದುಹಾಕಲು ವಿಫಲರಾದರೆ, ಈ ಕಾರ್ಯವನ್ನು ಟ್ವೀಟರ್, ಫೇಸ್ ಬುಕ್ ಸಂಸ್ಥೆ ಪೋಸ್ಟ್ ಗಳನ್ನು ತೆಗೆದು ಹಾಕಬೇಕಾಗುತ್ತದೆ ಎಂದು ಕೋರ್ಟ್ ನಿರ್ದೇಶನ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next