Advertisement

ಎಸ್‌.ಎಂ.ಎಸ್‌.: ರಾಷ್ಟ್ರೀಯ ವಿಜ್ಞಾನ ದಿನ

01:00 AM Mar 21, 2019 | Team Udayavani |

ಬ್ರಹ್ಮಾವರ: ಇಲ್ಲಿನ ಎಸ್‌.ಎಂ. ಎಸ್‌. ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಯಿತು.

Advertisement

ಹೆಬ್ರಿ ವಲಯದ ಕ್ಲಸ್ಟರ್‌ ಅಧಿಕಾರಿ ವೀಣಾ ಶೆಟ್ಟಿ ಹಾಗೂ ಶಾಲಾ ಶಿಕ್ಷಕರ ಮಾರ್ಗದರ್ಶನದೊಂದಿಗೆ ಶಾಲಾ ವಿದ್ಯಾರ್ಥಿಗಳು ಆಧುನಿಕ ಯುಗದಲ್ಲಿ ವ್ಯವಸಾಯ ಕ್ಷೇತ್ರದಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳು, ಸಾಂಪ್ರದಾಯಿಕ ಆಹಾರ, ಸಂಸ್ಕರಿಸಿದ ಆಹಾರದ ಬಗ್ಗೆ ಜನರ ಅಭಿಪ್ರಾಯ, ವಿದ್ಯುತ್ತಿನ ಉಳಿತಾಯ, ಮಧುಮೇಹ ನಿಯಂತ್ರಣ ಹಾಗೂ ಆರೋಗ್ಯಕರ ಆಹಾರ ಕ್ರಮ ಮತ್ತು ದೈನಂದಿನ ಜೀವನದಲ್ಲಿ ಪ್ಲಾಸ್ಟಿಕ್‌ ನಿಯಂತ್ರಣದ ಕುರಿತು ಜಾಗೃತಿ ಹೀಗೆ ವೈಜ್ಞಾನಿಕ ವಿಷಯಗಳಿಗೆ ಸಂಬಂಧಿಸಿದಂತೆ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದರು.
ಪ್ರಬಂಧಗಳನ್ನು ಮಂಡಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.

ಅತಿಥಿಯಾಗಿ ನಿವೃತ್ತ ಪ್ರಾಂಶುಪಾಲ ಸೀತಾರಾಮ್‌ ಶೆಟ್ಟಿ ಬಾಕೂìರು ಅವರು ಮಾತನಾಡಿ, ಇಂತಹ ಸಂಶೋಧನಾ ಕಾರ್ಯಗಳು ವಿದ್ಯಾರ್ಥಿಗಳು ವೈಜ್ಞಾನಿಕವಾಗಿ ಯೋಚಿಸಲು ಹಾಗೂ ಬೆಳೆಯಲು ಸಹಕಾರಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಮಳೆಕೊಯ್ಲು ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿಯನ್ನು ಮೂಡಿಸಿದರು.

ಶಾಲಾ ಪ್ರಾಂಶುಪಾಲೆ ಅಭಿಲಾಷಾ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಶ್ರಾವ್ಯಾ ಕಾರ್ಯಕ್ರಮ ನಿರೂಪಿಸಿ, ವಿದ್ಯಾರ್ಥಿ ವಿಯೊಲ್‌ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next