Advertisement

ಹಾವು ಕಚ್ಚಿ ಕಬ್ಬಿಣ ಕೋಲೇಶ್ವರ ಮಠದ ಇಮ್ಮಡಿ ಗುರುಮಲ್ಲಸ್ವಾಮೀಜಿ ಸಾವು

09:02 PM Dec 11, 2021 | Team Udayavani |

ಗುಂಡ್ಲುಪೇಟೆ: ತಾಲೂಕಿನ ಗೋಪಾಲಪುರ ಗ್ರಾಮದ ಕಬ್ಬಿಣ ಕೋಲೇಶ್ವರ ಮಠದ ಕಿರಿಯ ಮಠಾಧೀಶ ಇಮ್ಮಡಿ ಗುರುಮಲ್ಲಸ್ವಾಮೀಜಿ(42) ಹಾವು ಕಚ್ಚಿ ಸಾವನ್ನಪ್ಪಿದ್ದಾರೆ.

Advertisement

ಮಠದ ಜಮೀನಿನಲ್ಲಿ ಕೃಷಿ ಕಾರ್ಮಿಕರೊಂದಿಗೆ ಕಳೆ ಕೀಳುತ್ತಿದ್ದಾಗ ಹಾವು ಶ್ರೀಗಳ ಪಾದದ ಬಳಿ ಕಚ್ಚಿದೆ. ಚಿಕಿತ್ಸೆ ಗುಂಡ್ಲುಪೇಟೆ ಆಸ್ಪತ್ರೆಗೆ ದಾಖಲು ಮಾಡಿದ ಬಳಿಕ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಕಳುಹಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಸಂಜೆ ಸಾವನ್ನಪ್ಪಿದ್ದಾರೆ.

ಶ್ರೀಗಳ ಅಂತ್ಯಕ್ರಿಯೆ ಗೋಪಾಲಪುರದ ಮಠದ ಬಳಿ ಭಾನುವಾರ ನಡೆಯಲಿದ್ದು, ಜಿಲ್ಲೆಯ ವಿವಿಧ ಮಠಗಳ ಶ್ರೀಗಳು ಬರಲಿದ್ದಾರೆ. ಶಿವೈಕ್ಯರಾದ ಗುರುಮಲ್ಲ ಸ್ವಾಮೀಜಿ ಮೂಲತಃ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಸೂರಹಳ್ಳಿ ಗ್ರಾಮದವರಾಗಿದ್ದಾರೆ.

ನಿಧನಕ್ಕೆ ಶಾಸಕ ಸಿ.ಎಸ್.ನಿರಂಜನಕುಮಾರ್, ಕಾಂಗ್ರೆಸ್ ಮುಖಂಡ ಹೆಚ್.ಎಂ.ಗಣೇಶಪ್ರಸಾದ್, ಚಾಮುಲ್ ಅಧ್ಯಕ್ಷ ನಂಜುಂಡಪ್ರಸಾದ್, ಕಾಡಾ ಮಾಜಿ ಅಧ್ಯಕ್ಷ ಹೆಚ್.ಎಸ್.ನಂಜಪ್ಪ ಸೇರಿದಂತೆ ಇನ್ನಿತರ ಸಂತಾಪ ಸೂಚಿಸಿದರು.

ಇದನ್ನೂ ಓದಿ : ಭಾರತೀಯರಿಗೆಂದೇ ಪ್ರತ್ಯೇಕವಾಗಿ ಸಿದ್ಧವಾಗಲಿದೆ ಪಾದದ ಅಳತೆಗೋಲು!

Advertisement
Advertisement

Udayavani is now on Telegram. Click here to join our channel and stay updated with the latest news.

Next