Advertisement

CM Siddaramaiah ವಿರುದ್ಧ ಇ.ಡಿ.ಗೆ ದಾಖಲೆ ಸಲ್ಲಿಸಿದ ಸ್ನೇಹಮಯಿ ಕೃಷ್ಣ

12:16 AM Oct 04, 2024 | Team Udayavani |

ಬೆಂಗಳೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಶಾಂತಿನಗರದಲ್ಲಿರುವ ಜಾರಿ ನಿರ್ದೇಶನಾಲಯ (ಇ.ಡಿ.) ಕಚೇರಿಗೆ ಗುರುವಾರ ಹಾಜರಾಗಿ ಕೆಲವು ದಾಖಲೆ ಹಾಗೂ ಹೇಳಿಕೆಗಳನ್ನು ನೀಡಿದ್ದಾರೆ.

Advertisement

ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ದೂರುದಾರ ಸ್ನೇಹಮಯಿ ಕೃಷ್ಣಗೆ ಇಡಿ ಸಮನ್ಸ್‌ ನೀಡಿತ್ತು. ಈ ಹಿನ್ನೆಲೆಯಲ್ಲಿ ಗುರುವಾರ ಬೆಂಗಳೂರಿನ ಶಾಂತಿನಗರದ ಇ.ಡಿ. ಕಚೇರಿಗೆ ಸ್ನೇಹಮಯಿ ಕೃಷ್ಣ ವಿಚಾರಣೆಗೆ ಆಗಮಿಸಿದ್ದರು. ಬೆಳಗ್ಗೆ 11 ಗಂಟೆಯಿಂದ ಸಂಜೆ 6.15ರ ವರೆಗೆ ಸುದೀರ್ಘ‌ವಾಗಿ ಇಡಿ ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದಾರೆ.

ಸ್ನೇಹಮಯಿ ಕೃಷ್ಣ ಆರೋಪಕ್ಕೆ ಸಂಬಂಧಿಸಿದಂತೆ ಹಲವಾರು ಮಾಹಿತಿಯನ್ನು ಇಡಿ ಅಧಿಕಾರಿಗಳು ಕಲೆ ಹಾಕಿದ್ದಾರೆ. ಇವರು ಇಡಿಗೆ ಸಲ್ಲಿಸಿರುವ ದೂರಿನಲ್ಲಿ 500 ಪುಟಕ್ಕಿಂತ ಹೆಚ್ಚಿನ ದಾಖಲೆಗಳನ್ನು ಕೊಟ್ಟಿದ್ದರು. ಅದರಲ್ಲಿ ಕೆಲವು ಅಂಶಗಳನ್ನು ಕನ್ನಡದಲ್ಲಿ ಉಲ್ಲೇಖಿಸಲಾಗಿತ್ತು. ಯಾವ ದಾಖಲೆ ಯಾವುದಕ್ಕೆ ಪೂರಕವಾಗಿದೆ ಎಂಬುದರ ಕುರಿತು ಸ್ನೇಹಮಯಿ ಕೃಷ್ಣ ಅವರಿಂದ ಇಡಿ ಮಾಹಿತಿ ಕಲೆ ಹಾಕಿ ಇಡಿ ಹೇಳಿಕೆ ದಾಖಲಿಸಿಕೊಂಡಿದೆ. ಸ್ನೇಹಮಯಿ ಕೃಷ್ಣ ಹಾಗೂ ಅವರ ಕುಟುಂಬದ ಮಾಹಿತಿ, ಆದಾಯ ಮೂಲ, ಬ್ಯಾಂಕ್‌ ವಿವರ ಸೇರಿದಂತೆ ಹಲವಾರು ದಾಖಲೆಗಳನ್ನು ಇಡಿ ಅಧಿಕಾರಿಗಳು ಸಂಗ್ರಹಿಸಿದ್ದಾರೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next