Advertisement

Kedarnath ದೇಗುಲದ ಸಮೀಪ ಹಿಮಪಾತ: ವೀಡಿಯೋ ವೈರಲ್‌

12:48 AM Jul 01, 2024 | Team Udayavani |

ರುದ್ರಪ್ರಯಾಗ: ಉತ್ತರಾಖಂಡದ ಕೇದಾರನಾಥ ದೇಗುಲ ಸಮೀಪ ರವಿವಾರ ಬೃಹತ್‌ ಪ್ರಮಾಣದಲ್ಲಿ ಹಿಮಪಾತವಾಗಿದೆ. ಅದೃಷ್ಟವಶಾತ್‌ ಯಾವುದೇ ಹಾನಿ ಉಂಟಾಗಿಲ್ಲ ಎಂದು ರುದ್ರಪ್ರಯಾಗ ಜಿಲ್ಲಾಡಳಿತ ಖಚಿತಪಡಿಸಿದೆ. ಕೇದಾರನಾಥ ಸೇರಿದಂತೆ ಸಂಪೂರ್ಣ ಪ್ರದೇಶ ಸುರಕ್ಷಿತವಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಕೇದಾರನಾಥ ದೇಗುಲದಿಂದ 4 ಕಿ.ಮೀ. ದೂರ ಇರುವ ಗಾಂಧಿ ಸರೋವರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ರವಿವಾರ ಬೆಳಗ್ಗೆ 5 ಗಂಟೆಗೆ ಈ ಘಟನೆ ನಡೆದಿದೆ. ಹಿಮಪಾತ ಆಗುವ ದೃಶ್ಯವನ್ನು ಭಕ್ತರೊಬ್ಬರು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದು ವೈರಲ್‌ ಆಗಿದೆ. 2022ರ ಸೆಪ್ಟಂಬರ್‌ನಿಂದ ಅಕ್ಟೋಬರ್‌ ಅವಧಿಯಲ್ಲಿ 3 ಬಾರಿ ಅಲ್ಲಿ ಹಿಮಪಾತವಾಗಿತ್ತು.

Advertisement

Advertisement

Udayavani is now on Telegram. Click here to join our channel and stay updated with the latest news.

Next