Advertisement

ಅದೆಷ್ಟೋ ಮಂದಿ ನಿರುದ್ಯೋಗಿಗಳಾಗಿಯೇ ಉಳಿದಿದ್ದಾರೆ : ಡಾ.ಜಿ. ಪರಮೇಶ್ವರ್ ವಿಷಾದ

09:39 PM Feb 16, 2023 | Team Udayavani |

ಕೊರಟಗೆರೆ: ಭಾರತದಲ್ಲಿ ಲಕ್ಷಾಂತರ ಜನರು ಪ್ರತಿ ವರ್ಷ ಪದವಿ ಪಡೆದು ಇಂಜಿನಿಯರ್, ಡಾಕ್ಟರ್‌ಗಳು ಆಗುತ್ತಾರೆ, ಆದರೆ ಉದ್ಯೋಗ ಸಿಗುತ್ತಿಲ್ಲ, 60-70 ವರ್ಷದ ಹಿಂದೆ ಎಸ್‌ಎಸ್‌ಎಲ್‌ಸಿ ಓದಿದ್ದರೆ ಸಾಕು ಸರ್ಕಾರವೇ ಮನೆ ಬಾಗಿಲಿಗೆ ಬಂದು ಉದ್ಯೋಗ ಕೊಡುತ್ತಿತ್ತು. ಈಗ ಪದವಿ ಆದರೂ ಸಹ ಸರ್ಕಾರಿ ಕೆಲಸ ಇಲ್ಲದೇ ಅದೆಷ್ಟೋ ವಿದ್ಯಾರ್ಥಿಗಳು ನಿರುದ್ಯೋಗಿಗಳಾಗಿಯೇ ಉಳಿದಿದ್ದಾರೆ ಎಂದು ಮಾಜಿ ಡಿಸಿಎಂ ಹಾಗೂ ಶಾಸಕ ಡಾ.ಜಿ ಪರಮೇಶ್ವರ್ ವಿಷಾದವನ್ನು ವ್ಯಕ್ತಪಡಿಸಿದರು.

Advertisement

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯೋಗ ಮತ್ತು ತರಬೇತಿ ಇಲಾಖೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹಾಲಪ್ಪ ಪ್ರತಿಷ್ಠಾನ ಇವರ ವತಿಯಿಂದ ಆಯೋಜಿಸಲಾದ ಬೃಹತ್ ಉದ್ಯೋಗ ಮೇಳ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿ, ಕೇವಲ 75 ವರ್ಷದಲ್ಲಿ ಭಾರತ ಪ್ರಪಂಚದಲ್ಲಿ ಅರ್ಥಿಕ ವ್ಯವಸ್ಥೆಯಲ್ಲಿ ಸದೃಢವಾಗಿ ನಿಂತಿದೆ. ನಿಮ್ಮಂತಹ ಅದೆಷ್ಟೋ ವಿದ್ಯಾರ್ಥಿಗಳ ಅನೇಕ ಉದ್ಯೋಗಗಳನ್ನು ಕಲ್ಪಿಸಿಕೊಂಡು ಮಾಡಿರುವ ಸಾಧನೆಯಿಂದಲೇ ಆಗಿರುವುದು. ಗ್ರಾಮೀಣ ಭಾಗದ ಮಕ್ಕಳು ವಿದೇಶಗಳಿಗೆ ಹೋಗಿ ಕೆಲಸ ಮಾಡುವುದಕ್ಕಿಂತ ವಾಸವಿರುವಂತಹ ಪ್ರದೇಶಗಳಲ್ಲೇ ಹೇಗೆ ಉದ್ಯೋಗ ಕಲ್ಪಿಸಿಕೊಳ್ಳಬೇಕು ಎಂಬುದು ಕಾರ್ಯಕ್ರಮದಲ್ಲಿ ದೊಡ್ಡ ದೊಡ್ಡ ಕಂಪನಿಯ ಮುಖ್ಯಸ್ಥರು ತಿಳಿಸಿಕೊಡಲಿದ್ದಾರೆ ಎಂದು ಹೇಳಿದರು.

ದೇಶದ ಅಭಿವೃದ್ಧಿಗೆ, ಬೆಳವಣೆಗೆಗೆ ನಿಮ್ಮಿಂದ ಏನಾದರೂ ಸಹಾಯ ಆಗಬೇಕು ಎಂಬ ಉದ್ದೇಶ. ವರ್ಷಕ್ಕೋಮ್ಮೆ ಉದ್ಯೋಗ ಮೇಳ ಕಾರ್ಯಕ್ರಮವು ನಡೆಯುವಂತೆ ಮಾಡುತ್ತೇನೆ, ದೊಡ್ಡ ಪ್ರಮಾಣದಲ್ಲಿ ದೊಡ್ಡ ದೊಡ್ಡ ಕಂಪನಿಗಳನ್ನು ಕರೆಸಿ ಮುಂದಿನ ದಿನಗಳಲ್ಲಿ ಕೊರಟಗೆರೆಯಲ್ಲಿ ಡಿಪ್ಲೋಮೊ ಇನ್ಸ್ಟಿಟ್ಯೂಟ್ ಶಿಕ್ಷಣ ಕೂಡ ಸಿಗುವಂತೆ ಮಾಡುವೆ ಎಂದು ಭರವಸೆ ನೀಡಿದರು.

ಕೌಶಲ್ಯಾಭಿವೃದ್ಧಿ ನಿಗಮ ಮಂಡಳಿಯ ಮಾಜಿ ಅಧ್ಯಕ್ಷ ಮುರಳಿಧರ ಹಾಲಪ್ಪ ಮಾತನಾಡಿ, ಒಳ್ಳೆಯ ವಿದ್ಯಾಭ್ಯಾಸ, ಉದ್ಯೋಗ ಸಿಗಬೇಕು, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತೀರ್ಣನಾಗಿ ಒಂದು ಸರ್ಕಾರಿ ಕೆಲಸ ಸಿಗಬೇಕು, ಉದ್ದಿಮೆದಾರನಾಗಿ ತನ್ನ ಕಂಪನಿಯಲ್ಲಿ ಹತ್ತಾರು ಜನಕ್ಕೆ ಕೆಲಸ ಕೊಡಬೇಕು, ವಿದೇಶಗಳಲ್ಲಿ ಕೆಲಸ ಮಾಡಬೇಕು, ಎಂಬುದು ಪೋಷಕರ ಕನಸಾಗಿರುತ್ತದೆ, ನಮ್ಮ ಕ್ಷೇತ್ರದ ಯುವಕರು- ಯುವತಿಯರು ಅವರವರ ತಂದೆ-ತಾಯಿ ಕನಸನ್ನು ನೆರೆವೇರಿಸಲೆಂದೇ ನಾವುಗಳು ಈ ಉದ್ಯೋಗ ಮೇಳವನ್ನು ಆಯೋಜಿಸಿರುವುದು, ಇದರಲ್ಲಿ ಪಾಲ್ಗೊಂಡು ಸದುಪಯೋಗವನ್ನು ಪಡೆದುಕೊಳ್ಳಿ ಎಂದು ಹೇಳಿದರು.

ಸಾವಿರಾರು ಸಂಖೈಯಲ್ಲಿ ಉದ್ಯೋಗಾಂಕ್ಷಿಗಳು ಭಾಗವಹಿಸಿ ನೋಂದಣಿ ಕೇಂದ್ರಗಳಲ್ಲಿ ಸಾಲುಗಟ್ಟಿ ಯುವಕ-ಯುವತಿಯರು ನಿಂತಿದ್ದರು, 70ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿ ಆಯಾ ಶಿಕ್ಷಣಕ್ಕೆ ತಕ್ಕಂತೆ ಉದ್ಯೋಗಗಳನ್ನು ನೀಡಲು ಮುಂದಾಗಿದ್ದು, ಬೆಳಗ್ಗೆ 9:30 ರಿಂದ ಪ್ರಾರಂಭಗೊಂಡು ಸಂಜೆ 4 ಗಂಟೆಯವರೆಗೆ ಉದ್ಯೋಗ ಆಕಾಂಕ್ಷಿಗಳನ್ನು ನೋಂದಣಿಯನ್ನು ಮಾಡಿಕೊಂಡರು.

Advertisement

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಅಧಿಕಾರಿ ತಿಪ್ಪೇಸ್ವಾಮಿ,ಕಾಲೇಜಿನ ಪ್ರಾಂಶುಪಾಲ ಡಾ.ಪ್ರಸನ್ನ , ಎಸ್‌ಎಸ್‌ಐಟಿ ಪ್ಲೇಸ್ ಮೆಂಟ್ ಆಫೀಸರ್ ಆಶೋಕ್ ಮೆಹ್ತಾ ಸೇರಿದಂತೆ ಕಾಲೇಜಿನ ಉಪನ್ಯಾಸಕರು, ಸಾವಿರಾರು ಉದ್ಯೋಗಕಾಂಕ್ಷಿಗಳು ಸೇರಿದಂತೆ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next