ಬೆಳ್ತಂಗಡಿ: ನೇತ್ರಾವತಿ ನದಿ ನೀರಿನ ಹರಿವು ಕ್ಷೀಣಿಸಿರುವ ಹಿನ್ನೆಲೆಯಲ್ಲಿ ನೀರು ಮಲಿನವಾಗುವುದನ್ನು ತಡೆಯಲು ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟ ದಲ್ಲಿ ಸಾಬೂನು, ಶಾಂಪೂ ಗಳ ಮಾರಾಟ, ಬಳಕೆಯನ್ನು ನಿಷೇಧಿಸ ಲಾಗಿದೆ.
ಈ ಬಗ್ಗೆ ಧರ್ಮಸ್ಥಳ ಗ್ರಾ.ಪಂ. ಸಭೆಯಲ್ಲಿ ನಿರ್ಣಯ ಕೈಗೊಂಡು ನದಿ ಸುತ್ತಲಿನ ಅಂಗಡಿಗಳಲ್ಲಿ ಸೋಪು, ಶಾಂಪೂ ಮಾರಾಟ ಮಾಡದಂತೆ ನೋಟಿಸ್ ಕಳುಹಿಸಲಾಗಿದೆ.
ಈಗಾಗಲೇ ಧರ್ಮಸ್ಥಳ ಕ್ಷೇತ್ರದ ವತಿಯಿಂದ ಸ್ನಾನಘಟ್ಟದಲ್ಲಿ ಸ್ವತ್ಛತೆ ಕಾಪಾ ಡುವಂತೆ ನಿತ್ಯ ಧ್ವನಿ ವರ್ಧಕದ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಆದರೆ ಯಾತ್ರಿ ಕರು ನದಿಗೆ ಬಟ್ಟೆ ಎಸೆಯುವುದು, ಸೋಪು, ಶಾಂಪೂ ಬಳಸಿ ಅದರ ಪ್ಲಾಸ್ಟಿಕ್ ನದಿಗೆ ಎಸೆಯುವುದು ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ಪಂಚಾಯತ್ ವತಿಯಿಂದಲೂ ಯಾತ್ರಿಕರಲ್ಲಿ ಜಾಗೃತಿ ಮೂಡಿಸು ಕಾರ್ಯವನ್ನು ಮಾಡಲಾಗಿದೆ ಎಂದು ಧರ್ಮಸ್ಥಳ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.