Advertisement

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ, ವದಂತಿಗೆ ಕ್ರಿಮಿನಲ್‌ ಕೇಸು

10:28 AM Apr 01, 2020 | sudhir |

ಮಂಗಳೂರು: ಪೊಲೀಸ್‌ ಆಯುಕ್ತರು, ಜಿಲ್ಲಾಧಿಕಾರಿ ಮತ್ತು ಇತರ ಸರಕಾರಿ ಅಧಿಕಾರಿಗಳ ಹೆಸರಿನಲ್ಲಿ ಸುಳ್ಳು ಸುದ್ದಿ ಮತ್ತು ವದಂತಿಯನ್ನು ವಾಟ್ಸ್‌ಆ್ಯಪ್‌ ಗ್ರೂಪ್‌ಗ್ಳಲ್ಲಿ ಕೆಲವು ಮಂದಿ ಕಿಡಿಗೇಡಿಗಳು ಹರಡುತ್ತಿದ್ದು, ಅಂತಹವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗುವುದು ಎಂದು ಮಂಗಳೂರು ಪೊಲೀಸ್‌ಆಯುಕ್ತ ಡಾ| ಹರ್ಷ ಪಿ.ಎಸ್‌. ತಿಳಿಸಿದ್ದಾರೆ. ಈಗಾಗಲೇ ಪ್ರಕರಣವೊಂದಕ್ಕೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದವರು ತಿಳಿಸಿದ್ದಾರೆ. ಅಧಿಕೃತವಾಗಿ ಅಧಿಕಾರಿಗಳಿಂದ ನೀಡಲಾದ ಸುದ್ದಿಗಳನ್ನಷ್ಟೇ ಜನರು ನಂಬಬೇಕು. ಅಧಿಕೃತರಿಂದ ಸಹಿ ಮಾಡಲಾದ ಪತ್ರಿಕಾ ಪ್ರಕಟನೆ ಅಥವಾ ಟ್ವಿಟರ್‌ ಮೂಲಕ ನೀಡಲಾದ ಹೇಳಿಕೆಗಳನ್ನು ಮಾತ್ರ ಜನರು ಪರಿಗಣಿಸಬೇಕು ಎಂದು ಮನವಿ ಮಾಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next