Advertisement

ಸಮಾಜ ಸೇವೆಯಲ್ಲೇ ಆನಂದ: ಮತ್ತಿಮಡು

05:47 PM Nov 19, 2021 | Team Udayavani |

ಶಹಾಬಾದ: ಸಮಾಜದಲ್ಲಿ ಸೇವಾ ಮನೋಭಾವ ಮೈಗೂಡಿಸಿಕೊಂಡು ಪ್ರಾಮಾಣಿಕತೆ ಪ್ರದರ್ಶಿಸಿದರೆ ಮನಸ್ಸಿಗೆ ಸಿಗುವ ಆನಂದವೇ ಬೇರೆ ಎಂದು ಶಾಸಕ ಬಸವರಾಜ ಮತ್ತಿಮಡು ಹೇಳಿದರು.

Advertisement

ಬುಧವಾರ ನಗರದ ಬಿಜೆಪಿ ಕಾರ್ಯಾಲಯದಲ್ಲಿ ಸಮಾಜ ಸೇವೆ ಗುರುತಿಸಿ ರಾಜ್ಯ ಮಟ್ಟದ “ಭಂಡಾರ ಸೇವಾ ರತ್ನ’ ಪ್ರಶಸ್ತಿ ಪಡೆದುಕೊಂಡ ಬಿಜೆಪಿ ಮುಖಂಡ ಬಸವರಾಜ ಮದ್ರಕಿ ಅವರನ್ನು ಸನ್ಮಾನಿಸಿ, ಅವರು ಮಾತನಾಡಿದರು.

ಸಮಾಜ ಸೇವೆ ಮಾಡುವ ಭಾಗ್ಯ ಎಲ್ಲರಿಗೂ ದೊರಕುವುದಿಲ್ಲ. ಸಮಾಜ ಸೇವೆ ಪುಣ್ಯದ ಕೆಲಸವಾಗಿದೆ. ಮನುಷ್ಯ ಕೇವಲ ಹಣ ಗಳಿಕೆಗೆ ಮಾತ್ರ ಸೀಮಿತನಾಗಿರುವುದರ ಜತೆಗೆ ಸ್ವಾರ್ಥಿ ಆಗುತ್ತಿದ್ದಾನೆ. ಕೆಲವರು ತಮ್ಮ ಕುಟುಂಬಕ್ಕಷ್ಟೇ ಸೀಮಿತರಾಗುತ್ತಿದ್ದಾರೆ. ಸಮಾಜದ ಅಭಿವೃದ್ಧಿಗೆ ಹಣವುಳ್ಳವರು ಶ್ರಮಿಸುತ್ತಿರುವುದು ವಿರಳವಾಗಿದೆ. ಆದರೆ ಬಸವರಾಜ ಮದ್ರಕಿ ಅವರು ಕುರುಬ ಸಮಾಜಕ್ಕಾಗಿ ಸಾಕಷ್ಟು ಸೇವೆ ಸಲ್ಲಿಸುತ್ತಿದ್ದಾರೆ ಎಂದರು.

ಬಿಜೆಪಿ ಮಂಡಲ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ನಾಗರಾಜ ಮೇಲಗಿರಿ, ಕನಕಪ್ಪ ದಂಡಗುಳಕರ್‌, ನಿಂಗಣ್ಣ ಹುಳಗೊಳ್ಕರ್‌,ಬಸವರಾಜ ಬಿರಾದಾರ, ಸಿದ್ರಾಮ್‌ ಕುಸಾಳೆ, ಚಂದ್ರಕಾಂತ ಗೊಬ್ಬೂರ, ಡಿ.ಸಿ. ಹೊಸಮನಿ, ಸುಭಾಷ ಜಾಪೂರ, ಸಂಜಯ ವಿಠಕರ್‌, ಭೀಮಯ್ಯ ಗುತ್ತೇದಾರ, ದತ್ತು ಫಂಡ, ಶ್ರೀನಿವಾಸ ಹಾಗೂ ಕಾರ್ಯಕರ್ತರು ಇದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next