Advertisement

ಇಂದ್ರಾಳಿ‌ ಹೆದ್ದಾರಿ ಗುಂಡಿಗಳಲ್ಲಿ ಹೊರಳಾಡಿ ಪ್ರತಿಭಟನೆ ನಡೆಸಿದ ಸಾಮಾಜಿಕ ಕಾರ್ಯಕರ್ತ

11:36 AM Sep 13, 2022 | Team Udayavani |

ಉಡುಪಿ: ರಾಷ್ಟ್ರೀಯ ಹೆದ್ದಾರಿ 169A ಇಂದ್ರಾಳಿ ರೈಲ್ವೆ ಸೇತುವೆ ರಸ್ತೆ ಅವ್ಯವಸ್ಥೆ ಖಂಡಿಸಿ ಮಂಗಳವಾರ ಬೆಳಗ್ಗೆ ಉಡುಪಿ ನಾಗರಿಕ ಸಮಿತಿಯ‌ ನಿತ್ಯಾನಂದ ಒಳಕಾಡು ವಿಭಿನ್ನವಾಗಿ ಪ್ರತಿಭಟಿನೆ ನಡೆಸಿದರು.‌

Advertisement

ರಸ್ತೆಯಲ್ಲಿರುವ ಗುಂಡಿಗಳಲ್ಲಿ ಕೇಸರಿ ಬಣ್ಣದ ದಿರಿಸು ತೊಟ್ಟ ಹೊರಳಾಡಿದ ಅವರು ಕೇಂದ್ರ ಹೆದ್ದಾರಿ ಪ್ರಾಧಿಕಾರಕ್ಕೆ ಬಿಸಿ ಮುಟ್ಟಿಸಿದರು‌.

ಇದನ್ನೂ ಓದಿ:ಭಾರತದಲ್ಲಿ 24ಗಂಟೆಯಲ್ಲಿ 4,369 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣ ಭಾರೀ ಇಳಿಕೆ

ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ‌ ಅವರು, ಇದು ಹಲವಾರು ವರ್ಷಗಳಿಂದ ಹೆದ್ದಾರಿ ಇಲಾಖೆ, ಜಿಲ್ಲಾಡಳಿತ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿ. ಈ ರೀತಿ ಪ್ರತಿಭಟನೆ ‌ಮಾಡದೇ ಬೇರೆ ದಾರಿ ಇರಲಿಲ್ಲ. ಪ್ರತಿನಿತ್ಯ ವಾಹನ ಸವಾರರು ಹೊಂಡ ಗುಂಡಿಗಳನ್ನು ದಾಟಿ‌ ಸಂಚರಿಸಲು ತ್ರಾಸ ಪಡುವಂತಾಗಿದೆ. ಜನಪ್ರತಿನಿಧಿಗಳಿಗೆ ಇದು ಯಾಕೆ ಅರ್ಥವಾಗುತ್ತಿಲ್ಲ. ಹೆದ್ದಾರಿ ಪ್ರಾಧಿಕಾರ ಶೀಘ್ರ ಎಚ್ಚೆತ್ತುಕೊಂಡು ರಸ್ತೆ ಸರಿಪಡಿಸಿ, ನೆನೆಗುದಿಗೆ ಬಿದ್ದಿರುವ ರೈಲ್ವೆ ಸೇತುವೆ ಯೋಜನೆ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next