Advertisement

ಪಿಒಕೆಯ ಶಾರದಾ ಪೀಠದ ಮೃತ್ತಿಕೆ ತರಲು ಚೀನದಿಂದ ಬಂದ ದಂಪತಿ

12:39 PM Aug 06, 2020 | mahesh |

ಮಣಿಪಾಲ: ಅಯೋಧ್ಯೆಯ ರಾಮ ದೇಗುಲದ ಭೂಮಿ ಪೂಜೆಗೆ ದೇಶದ ಮೂಲೆ ಮೂಲೆಗಳಿಂದ ಪವಿತ್ರ ಜಲ ಮತ್ತು ಮಣ್ಣನ್ನು ಅಯೋಧ್ಯೆಗೆ ತಲುಪಿಸಲಾಗಿದೆ. ಪಿಒಕೆಯಲ್ಲಿರುವ ಪವಿತ್ರ ಶಾರದಾ ದೇಗುಲದ ಮೃತ್ತಿಕೆಯನ್ನೂ ಅಯೋಧ್ಯೆಗೆ ಅರ್ಪಿಸಲಾಗಿದೆ.

Advertisement

ಭಾರತದ ಪ್ರಜೆಗಳಿಗೆ ಪಿಒಕೆಗೆ ಪ್ರಯಾಣಿಸಲು ಅನುಮತಿ ನೀಡಲಾಗುವುದಿಲ್ಲ. ಆದ್ದರಿಂದ ಚೀನದಲ್ಲಿ ವಾಸಿಸುತ್ತಿರುವ ಭರತವಂಶಿ ವೆಂಕಟೇಶ್‌ ರಾಮನ್‌ ಮತ್ತು ಅವರ ಪತ್ನಿ ಚೀನದಿಂದ ಪಾಸ್‌ಪೋರ್ಟ್‌ ಪಡೆದು ಪಿಒಕೆಗೆ ಆಗಮಿಸಿದ್ದಾರೆ. ಈ ದಂಪತಿಗಳು ಹಾಂಗ್‌ ಕಾಂಗ್‌ನಿಂದ ಪಾಕಿಸ್ಥಾನ ಆಕ್ರಮಿತ ಕಾಶ್ಮೀರದ (ಪಿಒಕೆ) ರಾಜಧಾನಿ ಮುಜಫ‌ರಾಬಾದ್‌ಗೆ ಬಂದು ಶಾರದಾ ದೇಗುಲ ತಲುಪಿದ್ದಾರೆ. ಅಲ್ಲಿ ಪೂಜೆ ಸಲ್ಲಿಸಿ ಪವಿತ್ರ ಮಣ್ಣಿನೊಂದಿಗೆ ಹಾಂಕಾಂಗ್‌ ಮೂಲಕ ದಿಲ್ಲಿಗೆ ಆಗಮಿಸಿದ್ದರು. ಇಲ್ಲಿ ಅವರು ಈ ಮಣ್ಣನ್ನು ಕರ್ನಾಟಕದ ನಿವಾಸಿ ಮತ್ತು ಸೇವಾ ಶಾರದಾ ಪೀಠದ ಸಕ್ರಿಯ ಸದಸ್ಯೆ ಅಂಜನಾ ಶರ್ಮಾ ಅವರಿಗೆ ಹಸ್ತಾಂತರಿಸಿದರು. ಅವರು ಬುಧವಾರ ಬೆಳಗ್ಗೆ ಅಯೋಧ್ಯೆಗೆ ಮಣ್ಣಿನೊಂದಿಗೆ ಆಗಮಿಸಿದ್ದು, ಭೂಮಿ ಪೂಜೆಗೆ ಸಮರ್ಪಿಸಲಾಗಿದೆ.

ಈ ದೇಗುಲ ಹಿಂದೂಗಳು ಮತ್ತು ಕಾಶ್ಮೀರ ಪಂಡಿತರ ಮೂರು ಪವಿತ್ರ ತಾಣಗಳಲ್ಲಿ ಒಂದಾಗಿದೆ. ಇದು ನೀಲಮಣಿ ನದಿಯ ದಡದಲ್ಲಿದ್ದು, ಭಾರತದ ಉರಿಯಿಂದ 70 ಕಿ.ಮೀ. ದೂರದಲ್ಲಿದೆ. ಇಲ್ಲಿಗೆ ಹೋಗಲು ಎರಡು ಮಾರ್ಗಗಳಿವೆ. ಮೊದಲನೆಯದು ಮುಜಫ‌ರಾಬಾದ್‌ನಿಂದ ಮತ್ತು ಎರಡನೆಯದು ಪೂಂಛ…-ರಾವಲಕೋಟ್‌ನಿಂದ. ಹೆಚ್ಚಾಗಿ ಉರಿಯಿಂದ ಮುಜಫ‌ರಾಬಾದ್‌ಗೆ ಹೋಗುವ ಮಾರ್ಗವನ್ನು ಬಳಸಲಾಗುತ್ತದೆ.

ಪಾಕ್‌ ಸರಕಾರ ಕಳೆದ ವರ್ಷ ಮಾ.25ರಂದು ಕಾರಿಡಾರ್‌ ನಿರ್ಮಾಣಕ್ಕೆ ಅನುಮೋದನೆ ನೀಡಿತ್ತು. ಇದರಿಂದ ಭಾರತದ ಹಿಂದೂಗಳು ಶಾರದಾ ದೇಗುಲಕ್ಕೆ ತೆರಳಲು ಅನುಕೂಲವಾಗಲಿದೆಎ ಎನ್ನಲಾಗಿತ್ತು. ಇಲ್ಲಿ ಶಾರದಾ ವಿಶ್ವವಿದ್ಯಾಲಯವೂ ಇತ್ತು, ಐದು ಸಾವಿರಕ್ಕೂ ಹೆಚ್ಚು ವಿದ್ವಾಂಸರು ಅಧ್ಯಯನ ಮಾಡುತ್ತಿದ್ದರು. ಆದಿ ಶಂಕರಾಚಾರ್ಯರು ಸಹ ಅಲ್ಲಿ ಅಧ್ಯಯನ ಮಾಡಿದ್ದರು ಎಂಬ ಉಲ್ಲೇಖ ಇದೆ.

ರಾಜ್ಯದಿಂದ ಜಲ ಅರ್ಪಣೆ
ಕರ್ನಾಟಕದ ಅಂಜನಾ ಪರ್ವತದಿಂದ ಪವಿತ್ರ ನೀರನ್ನು ಅಂಜನಾ ಶರ್ಮ ಅವರು ರಾಮ ಜನ್ಮಭೂಮಿಗೆ ಅರ್ಪಿಸಿದ್ದಾರೆ. ಅಂಜನಾ ಪರ್ವತವನ್ನು ರಾಮನ ಭಕ್ತ ಹನುಮನ ಜನ್ಮಸ್ಥಳವೆಂದು ಗುರುತಿಸಲಾಗುತ್ತದೆ. ಶಿವಲಿಂಗವನ್ನು ರಾವಣ ಲಂಕೆಗೆ ಕೊಂಡೊಯ್ಯಲು ಬಳಸಿದ್ದು ಗೋಕರ್ಣದ ದಾರಿಯನ್ನು. ಹೀಗಾಗಿ ಗೋಕರ್ಣದ ಪವಿತ್ರ ನೀರನ್ನೂ ಅಯೋಧ್ಯೆಗೆ ತಲುಪಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next