Advertisement

ಮಣ್ಣು ಉಳಿಸಿ ಅಭಿಯಾನ: ನಟಿ ಸಮಂತಾ ರುಥ್‌ ಪ್ರಭು ಜತೆ ಸದ್ಗುರು ಕಾರ್ಯಕ್ರಮ

11:54 PM Jun 15, 2022 | Team Udayavani |

ಹೈದರಾಬಾದ್‌: “ಮಣ್ಣು ಉಳಿಸಿ’ ಅಭಿಯಾನದ ಭಾಗವಾಗಿ ಸದ್ಗುರು ಜಗ್ಗಿ ವಾಸುದೇವ ಅವರು ಬುಧವಾರ ತೆಲಂಗಾಣದ ಹೈದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

Advertisement

ರಾಜ್ಯ ಸಚಿವ ಕೆ.ಟಿ. ರಾಮರಾವ್‌ ಮತ್ತು ನಟಿ ಸಮಂತಾ ರುಥ್‌ ಪ್ರಭು ಕಾರ್ಯಕ್ರಮವನ್ನು ನಡೆಸಿಕೊಟ್ಟಿದ್ದಾರೆ. ಮಣ್ಣು ರಕ್ಷಿಸುವ ಬಗ್ಗೆ ಅರಿವು ಮೂಡಿಸುತ್ತಾ 26 ರಾಷ್ಟ್ರಗಳನ್ನು ಏಕಾಂಗಿಯಾಗಿ ಬೈಕ್‌ನಲ್ಲಿ ಸುತ್ತಾಡಿ ಬಂದಿರುವ ಸದ್ಗುರು, ಹೈದರಾಬಾದ್‌ನ ಜನರೊಂದಿಗೆ ಸಂವಾದವನ್ನೂ ನಡೆಸಿದರು.

ಮಣ್ಣು ರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಿದರು. ಸದ್ಗುರು ಅವರು ಜೂ. 19ರಂದು ಬೆಂಗಳೂರು ಮತ್ತು ಮೈಸೂರಿನಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next