Advertisement

ಸೊಲ್ಲಾಪುರ ಪಟಾಕಿ ಕಾರ್ಖಾನೆ ದುರಂತ ಸಾವಿನ ಸಂಖ್ಯೆ 4ಕ್ಕೆ ಏರಿಕೆ

04:54 PM Jan 02, 2023 | Team Udayavani |

ಸೊಲ್ಲಾಪುರ : ಸೊಲ್ಲಾಪುರ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಸೋಮವಾರ ಮತ್ತೊಬ್ಬರು ಗಾಯಗೊಂಡ ಕಾರ್ಮಿಕ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Advertisement

ಬಾರ್ಶಿ ತಾಲೂಕಿನ ಶಿರಾಳ ಗ್ರಾಮದಲ್ಲಿರುವ ಪಟಾಕಿ ಕಾರ್ಖಾನೆಯ ಘಟಕದಲ್ಲಿ ರವಿವಾರ ಸ್ಫೋಟದ ನಂತರ ಬೆಂಕಿ ಕಾಣಿಸಿಕೊಂಡಿದೆ. ಘಟನೆಯ ನಂತರ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, ಮತ್ತು ಅನೇಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಾಳುಗಳಲ್ಲಿ ಒಬ್ಬರು ಸೋಮವಾರ ಮುಂಜಾನೆ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next