Advertisement
ಶ್ರೀಕೃಷ್ಣಮಠದಲ್ಲಿ ಸ್ವಾಮೀಜಿಯವರು ಬೆಳಗ್ಗಿನ ನೈರ್ಮಾಲ್ಯ ವಿಸರ್ಜನೆ, ಉಷಃಕಾಲ ಪೂಜೆ, ಗೋಪೂಜೆಗಳನ್ನು ಗ್ರಹಣ ಆರಂಭವಾಗುವ ಮುನ್ನ ನಡೆಸಿದರು.
Related Articles
Advertisement
ಶ್ರೀ ಅನಂತೇಶ್ವರ, ಚಂದ್ರಮೌಳೀಶ್ವರ ಸಹಿತ ಎಲ್ಲ ದೇವಸ್ಥಾನಗಳಲ್ಲಿ ಬೆಳಗ್ಗೆ ಬೇಗನೆ ಪೂಜೆ ನಡೆಸಲಾಯಿತು. ಗ್ರಹಣ ಕಾಲದಲ್ಲಿ ಭಕ್ತರು ದೀಪಗಳಿಗೆ ಎಣ್ಣೆ ಹಾಕಿದರು.
ಉಡುಪಿ, ಕುಂದಾಪುರ: ಜನಸಂಚಾರ ವಿರಳಉಡುಪಿ/ಕುಂದಾಪುರ: ಗ್ರಹಣ ಕಾಲದಲ್ಲಿ ಉಡುಪಿ ಮತ್ತು ಕುಂದಾಪುರ ದಲ್ಲಿ ಜನಸಂಚಾರ ವಿರಳವಾಗಿತ್ತು. ಆಯ್ದ ಕೆಲವು ಕಡೆಗಳಲ್ಲಿ ಗ್ರಹಣ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು. ಎರಡೂ ನಗರಗಳಲ್ಲಿ ಹೆಚ್ಚಿನ ಅಂಗಡಿ ಗಳು ಮುಚ್ಚಿದ್ದವು. ಉಡುಪಿಯಲ್ಲಿ ಸಿಟಿ ಬಸ್ಗಳ ಸಂಚಾರವೂ ಇರಲಿಲ್ಲ. ಎಕ್ಸ್ಪ್ರೆಸ್ ಹಾಗೂ ಸರಕಾರಿ ಬಸ್ ತಂಗುದಾಣಗಳಲ್ಲಿಯೂ ಜನ ಸಂಚಾರ ಕಡಿಮೆಯಿತ್ತು. ಕುಂದಾಪುರದ ನಗರ ಭಾಗದಲ್ಲಿ ಬೆಳಗ್ಗೆ ಒಂದೆರಡು ಬಸ್ಗಳು ಸಂಚಾರ ನಡೆಸಿದ್ದವು. ಗ್ರಾಮೀಣ ಪ್ರದೇಶದಲ್ಲಿ ಬಸ್ ಸೇವೆ ಇರಲಿಲ್ಲ. ಬೈಂದೂರು, ಗಂಗೊಳ್ಳಿ, ಸಿದ್ದಾಪುರ, ಕೋಟೇಶ್ವರ, ಕೊಲ್ಲೂರು, ತೆಕ್ಕಟ್ಟೆ, ಶಂಕರನಾರಾಯಣ, ಹಾಲಾಡಿ, ಗೋಳಿ ಯಂಗಡಿ, ಉಪ್ಪುಂದ, ಹೆಮ್ಮಾಡಿ ಸಹಿತ ಎಲ್ಲ ಕಡೆಗಳಲ್ಲಿ ಬಹುತೇಕ ಇದೇ ಸ್ಥಿತಿಯಿತ್ತು. ಪೂಜೆ, ಸಮುದ್ರ ಸ್ನಾನಗ್ರಹಣ ಮೋಕ್ಷದ ಅನಂತರ ಅನೇಕ ಮಂದಿ ತಮ್ಮೂರಿನ ದೇವಸ್ಥಾನ ಗಳಿಗೆ ಹೋಗಿ ಪೂಜೆ ಸಲ್ಲಿಸಿದರು. ಕುಂದೇಶ್ವರ, ಕೋಟೇಶ್ವರ, ಮಾರಣ ಕಟ್ಟೆ ಬ್ರಹ್ಮಲಿಂಗೇಶ್ವರ, ಬಸೂÅರು ಮಹಾ ಲಿಂಗೇಶ್ವರ, ಪಂಚ ಶಂಕರನಾರಾ ಯಣ ಸಹಿತ ಹೆಚ್ಚಿನ ದೇಗುಲಗಳಲ್ಲಿ ಪೂಜೆ ಸಲ್ಲಿಸಿದರು. ಬೈಂದೂರಿನ ಸೋಮೇಶ್ವರದಲ್ಲಿ ಸಮುದ್ರ ಸ್ನಾನ ಮಾಡಿ, ಸೋಮೇ ಶ್ವರ ದೇವಸ್ಥಾನದಲ್ಲಿ ಪೂಜೆ ನೆರವೇ ರಿಸಿದರು. ಬಸ್ರೂರು: ಜನಸಂಚಾರವಿಲ್ಲ
ಬಸ್ರೂರು: ಬಳ್ಕೂರು,ಬಸ್ರೂರು, ಕೋಣಿ, ಆನಗಳ್ಳಿ, ಕಂದಾವರ, ಕಂಡೂÉರು, ಗುಲ್ವಾಡಿ ಮುಂತಾದೆಡೆ ರವಿವಾರ ಬೆಳಗ್ಗೆಯಿಂದಲೇ ಗ್ರಹಣ ಪ್ರಯುಕ್ತ ಯಾವುದೇ ಅಂಗಡಿ ಮುಂಗಟ್ಟುಗಳು, ಹೊಟೇಲ್ಗಳು ಬಾಗಿಲು ತೆರೆಯಲಿಲ್ಲ. ಜನ ಸಂಚಾರ, ವಾಹನ ಸಂಚಾರವು ವಿರಳವಿತ್ತು. ಗ್ರಹಣ ಕಾಲದ ಅನಂತರ ಕೆಲವು ಅಂಗಡಿಗಳು ಬಾಗಿಲು ತೆರೆದವು. ರಾಜ್ಯ ಹೆದ್ದಾರಿಯಲ್ಲಿ ಕೆಲವು ಖಾಸಗಿ ವಾಹನಗಳನ್ನು ಬಿಟ್ಟು ಬೇರಾವುದೇ ವಾಹನ ಸಂಚರಿಸಲಿಲ್ಲ.