Advertisement

ಸೈನಿಕರು, ಉಗ್ರರಿಂದಲೂ ಜನರ ಹತ್ಯೆ: ದಿಗ್ವಿಜಯ್‌ 

10:22 AM Apr 17, 2017 | |

ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ನಾಗರಿಕರು ಯೋಧರಿಂದ ಅಥವಾ ಉಗ್ರರಿಂದ ಹತ್ಯೆಗೀಡಾಗುತ್ತಾರೆ. ಈ ಮೂಲಕ ಎರಡೂ ಕಡೆಗಳಿಂದ ನಾಗರಿಕರು ತೊಂದರೆಗೆ ಈಡಾಗುತ್ತಿದ್ದಾರೆ. ಅವರ ಕುಟುಂಬವರು ಕಣ್ಣು, ಕೈ ಕಳೆದುಕೊಂಡು ಅನಾಥರಾಗಿದ್ದಾರೆ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ ಸಿಂಗ್‌ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದರ ಜತೆಗೆ ಕಣಿವೆ ರಾಜ್ಯದಲ್ಲಿ ಬಿಜೆಪಿ-ಪಿಡಿಪಿ ಮೈತ್ರಿ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ರಾಜ್ಯದ ಜನರಲ್ಲಿ ಅಭದ್ರತೆ ಕಾಡಲಾರಂಭಿಸಿದೆ ಎಂದು ಹೇಳಿದ್ದಾರೆ. 2005ರಿಂದ 2013-14ನೇ ಸಾಲಿನ ವರೆಗೆ ರಾಜ್ಯದಲ್ಲಿ ಉತ್ತಮ ವಾತಾವರಣ ಇತ್ತು. ಈ ಸಾಧನೆ ಕಾಂಗ್ರೆಸ್‌ಗೆ ಸಲ್ಲುತ್ತದೆ ಎಂದು ಹೇಳಿದ್ದಾರೆ. 

Advertisement

ಮಧ್ಯಪ್ರದೇಶದ ಮಾಜಿ ಸಿಎಂ ಹೇಳಿಕೆಗೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದ್ದು, ಸೇನೆಗೆ ಅಗೌರವ ತರುವ ಮಾತುಗಳನ್ನಾಡಿದ್ದಾರೆ. ಅವರು ಕ್ಷಮೆ ಕೋರಬೇಕೆಂದು ಒತ್ತಾಯಿ ಸಿದೆ. ಈ ಹೇಳಿಕೆ ವಿವಾದಕ್ಕೆ ಕಾರಣವಾಗುತ್ತಿದ್ದಂತೆಯೇ ಕಾಂಗ್ರೆಸ್‌ ವರಿಷ್ಠ ಮಂಡಳಿ ವಿಚಾರದಿಂದ ದೂರ ಸರಿದಿದೆ. 

Advertisement

Udayavani is now on Telegram. Click here to join our channel and stay updated with the latest news.

Next